ಸುಳ್ಯ: ಸುಳ್ಯ ಹವ್ಯಕ ವಲಯದ ವತಿಯಿಂದ ಗಣಪತಿ ಹವನ, ಲಲಿತಾ ಹವನ ಹಾಗೂ ದುರ್ಗಾಪೂಜೆ ಕಾರ್ಯಕ್ರಮಗಳನ್ನು ಸುಳ್ಯದ ” ಶಿವ ಕೃಪಾ” ಕಲಾಮಂದಿರದಲ್ಲಿ ನಡೆಸಲಾಯಿತು.
ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ಇವರು ಧ್ವಜಾರೋಹಣವನ್ನು ನಡೆಸಿದರು, ವಲಯದ ಕಾರ್ಯದರ್ಶಿಯಾದ ವಿಷ್ಣು ಕಿರಣ ನೀರಬಿದ್ರೆ ಇವರು ಫಲ ಸಮರ್ಪಿಸಿ ಶಂಖನಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ವಲಯದ ವತಿಯಿಂದ ದುರ್ಗಾ ಪೂಜೆಯನ್ನು ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ದಂಪತಿಗಳು ಗಣಪತಿ ಹವನ, ಲಲಿತಾ ಹವನವನ್ನು ಕುಂಜತ್ತೋಡಿ ರಮೇಶ್ ಭಟ್ ದಂಪತಿಗಳು ನೆರವೇರಿಸಿದರು. ವಲಯ ವೈದಿಕ ಪ್ರಧಾನರಾದ ವೇದಮೂರ್ತಿ ಕೃಷ್ಣ ಭಟ್ ಅರಂಬೂರು ಮತ್ತು ಮಂಡಲ ವೈದಿಕ ಪ್ರಧಾನರಾದ ವೆಂಕಟೇಶ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನೆರವೇರಿದವು.
ಮಹಾಮಂಡಲದ ಮಾತೃತ್ವ ವಿಭಾಗದ ಅಧ್ಯಕ್ಷರಾದ ಈಶ್ವರಿ ಶ್ಯಾಂ ಭಟ್ ಬೇರ್ಕಡವು ಇವರು ಮಾತೃತ್ವ ವಿಭಾಗದ ಕಾರ್ಯಾಚರಣೆಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.
ವಿಷ್ಣು ಗುಪ್ತ ವಿಶ್ವವಿದ್ಯಾಪೀಠ ಮುಳ್ಳೇರಿಯ ಮಂಡಲದ ನಿರ್ದೇಶಕರಾದ ಪ್ರೊ. ಟಿ. ಶ್ರೀಕೃಷ್ಣ ಭಟ್ ಅವರು ವಿಶ್ವವಿದ್ಯಾಪೀಠ ಬಗ್ಗೆ ಮಾಹಿತಿಗಳನ್ನು ನೀಡಿದರು ಈ ಸಂದರ್ಭದಲ್ಲಿ ಮಂಡಲದ ಮಾತೃ ಪ್ರಧಾನೆ ಕುಸುಮ ಪೆರ್ಮುಖ ಅವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…