ಸುಳ್ಯ: ಕರ್ನಾಟಕ ಸರಕಾರದ ನೂತನ ಜವಳಿ ನೀತಿ ಯೋಜನೆಯಡಿ ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಲಾಖಾ ಯೋಜನೆಗಳ ಕುರಿತು 2 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವು ಸೆ.30 ರಂದು ಬೆಳಗ್ಗೆ 10.30 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಜವಳಿ ಆಧಾರಿತ ಕೈಗಾರಿಕಾ ಘಟಕಗಳಾದ ಸಿದ್ಧ ಉಡುಪು ಘಟಕ, ಸ್ಯಾನಿಟರಿ ನ್ಯಾಪ್ಕಿನ್ ಘಟಕ ಹಾಗೂ ಎಸ್.ಎಂ.ಇ ಘಟಕಗಳನ್ನು ಪ್ರಾರಂಭಿಸುವ ಆಸಕ್ತ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಫಲಾನುಭವಿಗಳು ಭಾಗವಹಿಸಬಹುದು. ಆಸಕ್ತರು ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಇಂಡಸ್ಟ್ರಿಯಲ್ ಏರಿಯಾ, ಯೆಯ್ಯಾಡಿ, ಮಂಗಳೂರು ಕಚೇರಿ ಹಾಗೂ ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…