Advertisement
MIRROR FOCUS

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದರೆ  ಕ್ರಿಮಿನಲ್ ಕೇಸು ದಾಖಲಿಸಲು ….

Share

ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡು ಪಡೆದು, ಸರಕಾರಕ್ಕೆ ವಂಚನೆ ಮಾಡಿರುವವರ ವಿರುದ್ಧ ಐಪಿಸಿ 420 ಅಡಿ ಕ್ರಿಮಿನಲ್  ಕೇಸು ದಾಖಲಿಸಲು ರಾಜ್ಯ ಸರಕಾರದ ಕಂದಾಯ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೂಚಿಸಿದ್ದಾರೆ.

ಅವರು  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಕಾರ್ಡು ಪಡೆದಿರುವುದು ಅಕ್ಷಮ್ಯ ವಂಚನೆಯಾಗಿದೆ.  ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಿಂದಿರುಗಿಸಲು ಈಗಾಗಲೇ ಗಡುವು ನೀಡಲಾಗಿದೆ. ಆದರೂ ಮತ್ತೊಮ್ಮೆ ಅವಕಾಶ ನೀಡಿ ಕೂಡಲೇ ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಂಬಂಧ ಪಟ್ಟ ಕಚೇರಿಗೆ ಹಿಂದಿರುಗಿಸಬೇಕು. ಹಿಂದಿರುಗಿಸದೇ ಇದ್ದಲ್ಲಿ ಅಂತಹವರ ಕುಟುಂಬಗಳನ್ನು ಪತ್ತೆ ಮಾಡಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರವಾಹ ಪುನರ್ವಸತಿ :  ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿಗಳು, ಬೆಳ್ತಂಗಡಿ ತಾಲೂಕಿನ ಕೆಲವಡೆ ಸಂತ್ರಸ್ತರ ಮನೆ ಪುನರ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ತಕರಾರು ಎತ್ತಿರುವುದಕ್ಕೆ ಅಸಮಾಧಾನ ಸೂಚಿಸಿದರು. ಸಂತ್ರಸ್ತರ ಬದುಕು ಪುನರ್ ನಿರ್ಮಾಣದಲ್ಲಿ ಸರಕಾರ ನಿರಂತರವಾಗಿ ತೊಡಗಿಸಿದ್ದು, ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ನೆರೆ ಹಾವಳಿಯಲ್ಲಿ ಫಲಾನುಭವಿಗಳಿಗೆ ಆದಷ್ಟು ಬೇಗ ಪರಿಹಾರ ದೊರಕುವಂತೆ ಕಾರ್ಯನಿರ್ವಹಿಸಬೇಕು ಎಂದರು.   ಪಿಂಚಣಿದಾರರಿಗೆ  ತಾಂತ್ರಿಕ ಸಮಸ್ಯೆಗಳಿಂದ  ಪಿಂಚಣಿ ಸರಿಯಾಗಿ ದೊರಕದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಇವುಗಳನ್ನು ತ್ವರಿತವಾಗಿ ಪರಿಹರಿಸಿ ಕ್ಲಪ್ತವಾಗಿ ಪಿಂಚಣಿ ದೊರಕಿಸಿಕೊಡಲು ಮಂಜುನಾಥ್ ಪ್ರಸಾದ್ ತಿಳಿಸಿದರು.    ಪ್ರತಿಯೊಂದು ಗ್ರಾಮದಲ್ಲಿ ರುದ್ರಭೂಮಿ ಕಡ್ಡಾಯವಾಗಿ ಇರಬೇಕು, ಇಲ್ಲದ್ದಿದ್ದ ಪಕ್ಷದಲ್ಲಿ  ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಜಾಗವನ್ನು ಗುರುತಿಸಿ ರುದ್ರಭೂಮಿ ನಿರ್ಮಾಣ ಮಾಡುವಂತೆ ಆದೇಶ ನೀಡಿದರು.  ಕೃಷಿ ಹಾಗೂ ತೋಟಗಾರಿಕಾ ಬೆಳೆಹಾನಿಗೊಂಡವರಿಗೆ ಸಕಾಲಕ್ಕೆ ವಿಮಾ ಹಣ ದೊರಕದಿರುವ ಬಗ್ಗೆ ವಿಮಾ ಕಂಪೆನಿಗಳ ಅಧಿಕಾರಿಗಳೊಂದಿಗೆ ಕೂಡಲೇ ಚರ್ಚಿಸಲು ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್  ವೇದಿಕೆಯಲ್ಲಿದ್ದರು.  ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ , ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್  ಮಾಹಿತಿ ನೀಡಿದರು.   ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ತರಭೇತಿ ಐಎಎಸ್ ಅಧಿಕಾರಿ ರಾಹುಲ್ ಸಿಂಧ್ಯಾ, ಡಿಸಿಪಿ ಅರುಣಾಂಶು ಗಿರಿ  ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago