Advertisement
ಸುದ್ದಿಗಳು

ಸೂಕ್ತವಲ್ಲದ ಸಮಯದಲ್ಲಿ ಚಾರಣ ಮಾಡಿ ಸಮಸ್ಯೆಯಲ್ಲಿ ಸಿಕ್ಕಿಹಾಕಿಕೊಂಡರೇ ಚಾರಣಿಗರು ?

Share

ಸುಬ್ರಹ್ಮಣ್ಯ: ಒಂದು ಕಡೆ ಭಾರೀ ಮಳೆ. ಇನ್ನೊಂದು ಕಡೆ ಚಾರಣಕ್ಕೆ ಸೂಕ್ತವಲ್ಲದ ಸಮಯ. ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಈಗ ಸುಂದರವಾಗಿರುತ್ತದೆ. ಆದರೆ ಈ ಸಮಯ ಚಾರಣಕ್ಕೆ ಸೂಕ್ತವಲ್ಲ. ನವೆಂಬರ್ ನಂತರವೇ ಕುಮಾರಪರ್ವತ ಚಾರಣಕ್ಕೆ ಇಲ್ಲಿ ಸೂಕ್ತ . ಈಗ ಕಾಡುಪ್ರಾಣಿಗಳ ಹಾವಳಿ ಹೆಚ್ಚಿದೆ. ಹುಲಿ, ಆನೆಯಂತಹ ಪ್ರಾಣಿಗಳ ಸಂಚಾರವೂ ಇರುತ್ತದೆ. ಇದೇ ಈಗ ಸಮಸ್ಯೆಗೆ ಕಾರಣವಾಯಿತಾ ಎಂಬ ಸಂದೇಹ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ವಿವಿಧ ಖಾಸಗಿ ಕಂಪನಿಗಳಲ್ಲಿ ಉದ್ಯೋಗಿಯಾಗಿದ್ದವರು  ಕುಮಾರಪರ್ವತ ಚಾರಣಕ್ಕೆ ಶನಿವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಅದೇ ದಿನ ಸಂಜೆ ಗಿರಿಗದ್ದೆಗೆ ತಂಡವಾಗಿ ತೆರಳಿದರು. ಅಲ್ಲಿಂದ ಶೇಷಪರ್ವತ  ಏರಿದರು. ಎಲ್ಲರೂ 25 ವರ್ಷದ ಯುವಕರು. ಸುಸ್ತು ಅನ್ನೋದು ಮೈಯಲ್ಲಿಲ್ಲ. ಗಿರಿಗದ್ದೆಯಲ್ಲಿರುವ ಅರಣ್ಯ ಇಲಾಖೆಯ ತಪಾಸಣಾ ಕೇಂದ್ರದಲ್ಲಿ ಮುಚ್ಚಳಿಕೆ ಬರೆದು  12 ಜನ ಸೇರಿ ಒಟ್ಟು 4200 ರೂಪಾಯಿ ನೀಡಿ ಪರ್ವತ ಏರಿದರು.

ಪ್ರಕೃತಿ ಸೌಂದರ್ಯ ಸವಿದು ಹಿಂತಿರುಗುತ್ತಿರುವಾಗ ಸಂಜೆ ವೇಳೆಗೆ ಬೆಂಗಳೂರು ಗಾಯತ್ರಿ ನಗರದ ನಿವಾಸಿ ಸಂತೋಷ  ಎಂಬಾತನು ಕಾಣೆಯಾಗಿದ್ದನು. ಹುಡುಕಾಡಿದಾಗ ಸಿಗದೆ ಪೊಲೀಸರಿಗೆ, ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ಇದು  ಚಾರಣಕ್ಕೆ ಸೂಕ್ತವಾದ ಸಮಯವಲ್ಲ. ಇದನ್ನು ಅರಣ್ಯ ಇಲಾಖೆ ಸೂಚನೆ ಕಡ್ಡಾಯವಾಗಿ ನೀಡಬೇಕು. ಈ ಮಳೆಗಾಲದ ಸಮಯದಲ್ಲಿ ಕಾಡಿನಲ್ಲಿ  ಆನೆಗಳ ಕಾಟ, ಹುಲಿ , ಚಿರತೆಗಳ ಓಡಾಟ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಮಳೆಗಾಲದ ಅವಧಿಯಲ್ಲಿ ಚಾರಣ ಸೂಕ್ತವಲ್ಲ ಎಂಬ ಸೂಚನೆ ಕಡ್ಡಾಯವಾಗಿ ನೀಡಬೇಕಾಗಿದೆ. ಇಲ್ಲೂ ಹಾಗೆಯೇ ಆಗಿರುವ ಬಗ್ಗೆ ಸಂದೇಹ ಇದೆ. ಯುವಕರ ತಂಡದಲ್ಲಿ 5 ಮಂದಿ ಯುವಕರು ಮುಂದೆ ಬಂದರೆ ಅವರ ಹಿಂದೆ 6 ಜನರ ತಂಡ ಇತ್ತು. ಈ ನಡುವೆ ಒಬ್ಬ ಹೋಗುತ್ತಿದ್ದರು. ಈ ಸಂದರ್ಭ ಹುಲಿಯ ಸದ್ದು ಕೇಳುತ್ತದೆ ಎಂದು ಗಿರಿಗದ್ದೆಯ ಕಡೆಗೆ 3 ಯುವಕರು ಓಡಿದ್ದಾರೆ ಎಂಬ ಮಾಹಿತಿಯನ್ನೂ ಸ್ಥಳೀಯರ ಬಳಿ ಯುವಕರ ತಂಡ ಹೇಳಿದೆ. ಹೀಗಾಗಿ ಈಗ ಯುವಕ ಸಮಸ್ಯೆಗೆ ಸಿಲುಕಿಹಾಕಿಕೊಂಡಿರುವ ಸಾಧ್ಯತೆ ಹೆಚ್ಚಿದೆ ಎಂದು ಸ್ಥಳೀಯರು ಅನುಮಾನ ಪಡುತ್ತಾರೆ. ಮಂಗಳವಾರ ಬೆಳಗ್ಗೆ ತಂಡವಾಗಿ ಹುಡುಕಾಟ ನಡೆಸಲಾಗುತ್ತಿದೆ. ಆ ಬಳಿಕವೇ ಸ್ಪಷ್ಟವಾದ ಮಾಹಿತಿ ಲಭ್ಯವಾಗಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

13 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

14 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago