Advertisement
ಜಿಲ್ಲೆ

ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ: ಮಡಿಕೇರಿ ಜಿಲ್ಲಾಧಿಕಾರಿ ಸೂಚನೆ

Share

ಮಡಿಕೇರಿ: ಜಿಲ್ಲೆಯಲ್ಲಿ ಜೂ.20ರಿಂದ ಸಾಧಾರಣ ಮುಂಗಾರು ಮಳೆ ಅರಂಭವಾಗಲಿದ್ದು, ಈ ಸಂಬಂಧ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದರೊಂದಿಗೆ ಜೂ. 19 ರಿಂದ ಸಕಲ ಸನ್ನದ್ಧರಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗ್ರತೆ ದೃಷ್ಟಿಯಿಂದ ಪುರ್ನವಸತಿ ಕೆಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಪರಿಹಾರ ಕಾರ್ಯ ಹಾಗೂ ಮುಂಜಾಗ್ರತಾ ಕ್ರಮಗಳ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ನೈರ್ಸಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮಾಹಿತಿಯ ಅನ್ವಯ ಜೂ. 20 ರಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮುಂಜಾಗ್ರತಾ ಕ್ರಮವಾಗಿ ಮಳೆಗಾಲ ಮುಗಿಯುವವರೆಗೆ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪುನರ್ವಸತಿ ಸಂಬಂಧ ಪ್ರಥಮ ಹಾಗೂ ದ್ವಿತೀಯ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಮುಂದಿನ ಮೂರು ತಿಂಗಳಿಗೆ ಅವಶ್ಯವಿರುವ ಮನೆ ಬಾಡಿಗೆ ಹಣವನ್ನು ಎರಡು ದಿನಗಳಲ್ಲಿ ಪಾವತಿಸಲು ಕ್ರಮಕೈಗೊಂಡು ವರದಿ ನಿಡುವಂತೆ ಉಪವಿಭಾಗಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈಗಾಗಲೇ ಗುರುತಿಸಿರುವ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶದಲ್ಲಿನ ಜನರಿಗೆ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತದ ವತಿಯಿಂದ ತೆರೆಯಲಾಗುವ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವುದು ಹಾಗೂ ಈ ಪ್ರದೇಶಗಳಲ್ಲಿವಾಸಿಸುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.

ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ಸಮರ್ಥವಾಗಿ ತಡೆಯುವ ನಿಟ್ಟಿನಲ್ಲಿ ಅಗತ್ಯವಿರುವ ಜೀವ ರಕ್ಷಕ ಜಾಕೆಟ್, ರೈನ್‍ಕೋಟ್, ಟಾರ್ಪಲ್‍ಗಳ ದಾಸ್ತಾನು ಮಾಡಿಕೊಂಡು ಅಗತ್ಯ ಬಿದ್ದಲ್ಲಿ ಬಳಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಸೂಕ್ಷ್ಮ ಪ್ರದೇಶಗಳಲ್ಲಿನ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ರೋಗಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಕೃತಿ ವಿಕೋಪದಿಂದ ಸಂಭವಿಸಬಹುದಾದ ಅನಾಹುತಗಳನ್ನು ಸಮರ್ಥವಾಗಿ ನಿರ್ವಹಿಸಲು ನೋಡಲ್ ಅಧಿಕಾರಿಗಳು ತೆಗೆದುಕೊಳ್ಳುವ ನಿರ್ಧಾರವು ಸಾರ್ವಜನಿಕರಿಗೆ ಅನುಕೂಲಕರವಾಗಿರಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಬರೆ ಕುಸಿತ ಸಂಭವಿಸಬಹುದಾದ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾದಾಗ ತೆರವು ಕಾರ್ಯಾಚರಣೆ ನಡೆಸಲು ಅವಶ್ಯವಿರುವ ಹಿಟಾಚಿ, ಜೆಸಿಬಿಗಳನ್ನು ಸನ್ನದ್ಧವಾಗಿಟ್ಟುಕೊಂಡು ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಅವರು ಮಾತನಾಡಿ, ಈಗಾಗಲೇ 42 ಪುನರ್ವಸತಿ ಕೇಂದ್ರಗಳ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ತುರ್ತು ಸೇವೆಗಳಿಗೆ ಅವಶ್ಯವಿರುವ ವಾಹನಗಳನ್ನು ಸನ್ನದ್ಧವಾಗಿರಿಸಿಕೊಳ್ಳಲು ಸೂಚನೆ ನೀಡಿದರು.

ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಕುರಿತ ಭಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅನಾವರಣಗೊಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿ.ಪಂ ಯೋಜನಾ ನಿರ್ದೇಶಕ ಗುಡೂರು ಭೀಮಸೇನ್, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಶಂಷುದ್ದೀನ್, ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಇತರರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago