ಹ್ಯಾಮಿಲ್ಟನ್: ನ್ಯೂಝಿಲ್ಯಾಂಡ್ ವಿರುದ್ಧದ ಮೂರನೇ ಟ್ವೆಂಟಿ-20 ಪಂದ್ಯವು ಟೈ ಆಗಿದ್ದು, ಸೂಪರ್ ಓವರ್ ನಲ್ಲಿ ಭಾರತವು ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ತಂಡ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ರೋಹಿತ್ ಶರ್ಮಾ ಅರ್ಧಶತಕ ನೆರವಿನಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 179 ರನ್ ಗಳಿಸಿತ್ತು.ರೋಹಿತ್ ಶರ್ಮಾ 65 ರನ್ (40ಎ, 6ಬೌ,3ಸಿ) ದಾಖಲಿಸಿದರು.
179 ರನ್ ಗಳನ್ನು ಬೆನ್ನತ್ತಿದ ನ್ಯೂಝಿಲ್ಯಾಂಡ್ 20 ಓವರ್ ಗಳಲ್ಲಿ 179 ರನ್ ಗಳನ್ನು ದಾಖಲಿಸಲು ಮಾತ್ರ ಸಾಧ್ಯವಾಯಿತು. 20ನೆ ಓವರ್ ನಲ್ಲಿ ನ್ಯೂಝಿಲ್ಯಾಂಡ್ 9 ರನ್ ಗಳಿಸಬೇಕಾಗಿತ್ತು. ಮೊದಲ ಬಾಲ್ ನಲ್ಲಿ ಸಿಕ್ಸರ್ ನೀಡಿದ ಮುಹಮ್ಮದ್ ಶಮಿ ನಂತರದ 5 ಎಸೆತಗಳಲ್ಲಿ ನ್ಯೂಝಿಲ್ಯಾಂಡ್ 2 ರನ್ ಗಳಿಸಲಷ್ಟೇ ಅವಕಾಶ ನೀಡಿದರು.
ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿದ ನ್ಯೂಝಿಲ್ಯಾಂಡ್ 17 ರನ್ ಗಳನ್ನು ಗಳಿಸಿತು. ಭಾರತದ ಪರ ಕೊನೆಯ 2 ಎಸೆತಗಳಲ್ಲಿ 10 ರನ್ ಗಳ ಅವಶ್ಯಕತೆಯಿದ್ದಾಗ ರೋಹಿತ್ ಶರ್ಮಾ 2 ಸಿಕ್ಸರ್ ಸಿಡಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…