Advertisement
ಸುದ್ದಿಗಳು

ಸೂಪರ್ ಓವರ್ ನಲ್ಲಿ ಭಾರತಕ್ಕೆ ರೋಚಕ ಗೆಲುವು: ನ್ಯೂಝಿಲ್ಯಾಂಡ್ ವಿರುದ್ಧದ ಸರಣಿ ಕೈವಶ

Share

ಹ್ಯಾಮಿಲ್ಟನ್: ನ್ಯೂಝಿಲ್ಯಾಂಡ್ ವಿರುದ್ಧದ ಮೂರನೇ ಟ್ವೆಂಟಿ-20 ಪಂದ್ಯವು ಟೈ ಆಗಿದ್ದು, ಸೂಪರ್ ಓವರ್ ನಲ್ಲಿ ಭಾರತವು ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ತಂಡ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ರೋಹಿತ್ ಶರ್ಮಾ ಅರ್ಧಶತಕ ನೆರವಿನಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 179 ರನ್ ಗಳಿಸಿತ್ತು.ರೋಹಿತ್ ಶರ್ಮಾ 65 ರನ್ (40ಎ, 6ಬೌ,3ಸಿ) ದಾಖಲಿಸಿದರು.

179 ರನ್ ಗಳನ್ನು ಬೆನ್ನತ್ತಿದ ನ್ಯೂಝಿಲ್ಯಾಂಡ್ 20 ಓವರ್ ಗಳಲ್ಲಿ 179 ರನ್ ಗಳನ್ನು ದಾಖಲಿಸಲು ಮಾತ್ರ ಸಾಧ್ಯವಾಯಿತು. 20ನೆ ಓವರ್ ನಲ್ಲಿ ನ್ಯೂಝಿಲ್ಯಾಂಡ್ 9 ರನ್ ಗಳಿಸಬೇಕಾಗಿತ್ತು. ಮೊದಲ ಬಾಲ್ ನಲ್ಲಿ ಸಿಕ್ಸರ್ ನೀಡಿದ ಮುಹಮ್ಮದ್ ಶಮಿ ನಂತರದ 5 ಎಸೆತಗಳಲ್ಲಿ ನ್ಯೂಝಿಲ್ಯಾಂಡ್ 2 ರನ್ ಗಳಿಸಲಷ್ಟೇ ಅವಕಾಶ ನೀಡಿದರು.

ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿದ ನ್ಯೂಝಿಲ್ಯಾಂಡ್ 17 ರನ್ ಗಳನ್ನು ಗಳಿಸಿತು. ಭಾರತದ ಪರ ಕೊನೆಯ 2 ಎಸೆತಗಳಲ್ಲಿ 10 ರನ್ ಗಳ ಅವಶ್ಯಕತೆಯಿದ್ದಾಗ ರೋಹಿತ್ ಶರ್ಮಾ 2 ಸಿಕ್ಸರ್ ಸಿಡಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

3 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

10 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

10 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

17 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

19 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago