ವಿಶೇಷ ವರದಿಗಳು

ಸೂರಿಲ್ಲದ‌ ಬಡ ಕುಟುಂಬಕ್ಕೆ ಆಸರೆಯಾದ ಟೀಂ ನರೇಂದ್ರ ಪುತ್ತೂರು

Share
ಪುತ್ತೂರು: ಸಮಾಜ ಸೇವೆಯ ಮೂಲಕ ರಾಷ್ಟ‌ಕಟ್ಟುವ ಧ್ಯೇಯವನ್ನು ಅಳವಡಿಸಿಕೊಂಡು ರಚನೆಯಾದ ಟೀಂ ನರೇಂದ್ರ ಪುತ್ತೂರು ತಂಡವು ಸೂರಿಲ್ಲದ ಕುಟುಂಬವೊಂದಕ್ಕೆ ದಾನಿಗಳ ಸಹಕಾರದಿಂದ ಮನೆಯೊಂದನ್ನು ಕಟ್ಟಿಕೊಟ್ಟಿದೆ.
ನಾಲ್ಕು ಹೆಣ್ಣುಮಕ್ಕಳು ಮತ್ತು ಓರ್ವ ಪುತ್ರನನ್ನು ಹೊಂದಿರುವ ವಿಟ್ಲ ಸಮೀಪದ ಪೆರುವಾಯಿಯ‌ ಐತ್ತಪ್ಪ ನಾಯ್ಕ್ ದಂಪತಿಗಳದ್ದು ಪುಟ್ಟ ಡೇರೆಯೊಳಗೆ ವಾಸ. ಬಯಲಿನಲ್ಲೇ‌ ಶೌಚ, ‌ಸ್ನಾನಕ್ಕೆ ಮನೆ ಪಕ್ಕದ ತೋಡಿನ ಆಶ್ರಯ. ಇಂತಹ ಪರಿಸ್ಥಿತಿಯಲ್ಲಿದ್ದ ಬಡ ಕುಟುಂಬಕ್ಕೆ ಕೂಲಿ ಕೆಲಸದ ಮೂಲಕ ಏಕಮಾತ್ರ ಆಧಾರವಾಗಿದ್ದ ಮಗ ಮರದಿಂದ ಬಿದ್ದು ಸೊಂಟದಿಂದ ಕೆಳಗೆ ನಿಶ್ಯಕ್ತಿಯಿಂದಾಗಿ ನೆಲ ಬಿಟ್ಟು ಮೇಲೇಳಲಾಗದ್ದು ಮತ್ತೊಂದು ಆಘಾತ. ಇವರ ಮನಕಲಕುವ ಘಟನೆಯನ್ನು ತಿಳಿದು ನೆರವಾಗಲು ಮುಂದಾದದ್ದು ಪುತ್ತೂರಿನ ಟೀಂ ನರೇಂದ್ರ ‌ತಂಡ.
ಟೀಂ ನರೇಂದ್ರ ತಂಡದ ಅಧ್ಯಕ್ಷರಾದ ಸಂತೋಷ್ ಕುಮಾರ್ ವಾಗ್ಲೆ ಅವರ ನೇತೃತ್ವದ ಪದಾಧಿಕಾರಿಗಳ ತಂಡವು ದಾನಿಗಳ ಸಹಕಾರದಿಂದ ಕಟ್ಟಿದ ಸುಸಜ್ಜಿತವಾದ ಮನೆಯು ಇದೀಗ ಗೃಹ ಪ್ರವೇಶವನ್ನೂ ಮುಗಿಸಿ‌ ಕುಟುಂಬದ ಸದಸ್ಯರ ವಾಸಕ್ಕೆ ಲಭ್ಯವಾಗಿದೆ. ಅ.30 ರಂದು  ಮಾಣಿಲ ಶ್ರೀಧಾಮದ  ಶ್ರೀ ಮೋಹನದಾಸ ಸ್ವಾಮೀಜಿಯವರು ದೀಪ ಬೆಳಗಿಸುವುದರ ಮೂಲಕ ಹಸ್ತಾಂತರಿಸಲ್ಪಟ್ಟ ಹೊಸಮನೆಯಲ್ಲಿ ಟೀ ನರೇಂದ್ರದ ಖಜಾಂಜಿ ವೇ.ಮೂ.ಶ್ರೀಕೃಷ್ಣ ‌ಉಪಾಧ್ಯಾಯರು ಪೌರೋಹಿತ್ಯದಲ್ಲಿ ಗಣಪತಿ ಹವನ, ಸತ್ಯನಾರಾಯಣ ಪೂಜೆಯ ಮೂಲಕ ಶಾಸ್ತ್ರೋಕ್ತ ಗೃಹ ಪ್ರವೇಶ ಕಾರ್ಯಕ್ರಮ ಉಚಿತವಾಗಿ ನೆರವೇರಿಸಿದರು.
ಟೀಂ‌ ನರೇಂದ್ರ ತಂಡದ ಸೇವಾಕಾರ್ಯವನ್ನು ತಿಳಿದ ಪುತ್ತೂರಿನ‌ ಶಾಸಕರಾದ ಸಂಜೀವ ಮಠಂದೂರು  ಸ್ಥಳಕ್ಕಾಗಮಿಸಿ ಯುವಕರ ಕಾರ್ಯವನ್ನು ಶ್ಲಾಘಿಸಿ‌ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ‌ ಸಂದರ್ಭದಲ್ಲಿ ಚಣಿಲ ತಿಮ್ಮಪ್ಪ ಶೆಟ್ಟಿ, ದಾನಿಗಳಾದ ರವೀಂದ್ರ (ದೇವ ಟ್ರೇಡರ್ಸ್ ಪುತ್ತೂರು), ಡಾ. ಅಡಿಗ, ಡಾ ಭಾಸ್ಕರ ರಾವ್, ಟೀಮ್ ನರೇಂದ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ವಾಗ್ಲೆ, ಕಾರ್ಯದರ್ಶಿ ಡಾ. ಸುರೇಶ್ ಪುತ್ತೂರಾಯ, ಕಾರ್ಯಕರ್ತರಾದ ಸುರೇಶ್ ಕಲ್ಲಾರೆ, ಜಿ. ಕೃಷ್ಣ, ಮನೋಜ್ ಪಡ್ಡಾಯೂರು, ಅಶ್ವತ್ಥ್ ಮೊದಲಾದವರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

6 hours ago

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

6 hours ago

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ…

6 hours ago

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…

6 hours ago

ಕುಂಭಮೇಳ | ಸಮಯ ಬಾರದೆ ಒಂದಿನಿತೂ ಮುಂದೆ ಸಾಗದು…

ಅಲಮಟ್ಟಿ ಜಲಾಶಯದಲ್ಲಿ ತುಂಬಿಕೊಂಡು ಊರಿಗೆ ತಂಪೆರಲ ಊಡುತಿದ್ದ ಕೃಷ್ಣಾ ಭೀಮೆಯರ ಮೇಲಿನ ಸೇತುವೆ…

6 hours ago