Advertisement
ವಿಶೇಷ ವರದಿಗಳು

ಸೂರಿಲ್ಲದ‌ ಬಡ ಕುಟುಂಬಕ್ಕೆ ಆಸರೆಯಾದ ಟೀಂ ನರೇಂದ್ರ ಪುತ್ತೂರು

Share
ಪುತ್ತೂರು: ಸಮಾಜ ಸೇವೆಯ ಮೂಲಕ ರಾಷ್ಟ‌ಕಟ್ಟುವ ಧ್ಯೇಯವನ್ನು ಅಳವಡಿಸಿಕೊಂಡು ರಚನೆಯಾದ ಟೀಂ ನರೇಂದ್ರ ಪುತ್ತೂರು ತಂಡವು ಸೂರಿಲ್ಲದ ಕುಟುಂಬವೊಂದಕ್ಕೆ ದಾನಿಗಳ ಸಹಕಾರದಿಂದ ಮನೆಯೊಂದನ್ನು ಕಟ್ಟಿಕೊಟ್ಟಿದೆ.
ನಾಲ್ಕು ಹೆಣ್ಣುಮಕ್ಕಳು ಮತ್ತು ಓರ್ವ ಪುತ್ರನನ್ನು ಹೊಂದಿರುವ ವಿಟ್ಲ ಸಮೀಪದ ಪೆರುವಾಯಿಯ‌ ಐತ್ತಪ್ಪ ನಾಯ್ಕ್ ದಂಪತಿಗಳದ್ದು ಪುಟ್ಟ ಡೇರೆಯೊಳಗೆ ವಾಸ. ಬಯಲಿನಲ್ಲೇ‌ ಶೌಚ, ‌ಸ್ನಾನಕ್ಕೆ ಮನೆ ಪಕ್ಕದ ತೋಡಿನ ಆಶ್ರಯ. ಇಂತಹ ಪರಿಸ್ಥಿತಿಯಲ್ಲಿದ್ದ ಬಡ ಕುಟುಂಬಕ್ಕೆ ಕೂಲಿ ಕೆಲಸದ ಮೂಲಕ ಏಕಮಾತ್ರ ಆಧಾರವಾಗಿದ್ದ ಮಗ ಮರದಿಂದ ಬಿದ್ದು ಸೊಂಟದಿಂದ ಕೆಳಗೆ ನಿಶ್ಯಕ್ತಿಯಿಂದಾಗಿ ನೆಲ ಬಿಟ್ಟು ಮೇಲೇಳಲಾಗದ್ದು ಮತ್ತೊಂದು ಆಘಾತ. ಇವರ ಮನಕಲಕುವ ಘಟನೆಯನ್ನು ತಿಳಿದು ನೆರವಾಗಲು ಮುಂದಾದದ್ದು ಪುತ್ತೂರಿನ ಟೀಂ ನರೇಂದ್ರ ‌ತಂಡ.
ಟೀಂ ನರೇಂದ್ರ ತಂಡದ ಅಧ್ಯಕ್ಷರಾದ ಸಂತೋಷ್ ಕುಮಾರ್ ವಾಗ್ಲೆ ಅವರ ನೇತೃತ್ವದ ಪದಾಧಿಕಾರಿಗಳ ತಂಡವು ದಾನಿಗಳ ಸಹಕಾರದಿಂದ ಕಟ್ಟಿದ ಸುಸಜ್ಜಿತವಾದ ಮನೆಯು ಇದೀಗ ಗೃಹ ಪ್ರವೇಶವನ್ನೂ ಮುಗಿಸಿ‌ ಕುಟುಂಬದ ಸದಸ್ಯರ ವಾಸಕ್ಕೆ ಲಭ್ಯವಾಗಿದೆ. ಅ.30 ರಂದು  ಮಾಣಿಲ ಶ್ರೀಧಾಮದ  ಶ್ರೀ ಮೋಹನದಾಸ ಸ್ವಾಮೀಜಿಯವರು ದೀಪ ಬೆಳಗಿಸುವುದರ ಮೂಲಕ ಹಸ್ತಾಂತರಿಸಲ್ಪಟ್ಟ ಹೊಸಮನೆಯಲ್ಲಿ ಟೀ ನರೇಂದ್ರದ ಖಜಾಂಜಿ ವೇ.ಮೂ.ಶ್ರೀಕೃಷ್ಣ ‌ಉಪಾಧ್ಯಾಯರು ಪೌರೋಹಿತ್ಯದಲ್ಲಿ ಗಣಪತಿ ಹವನ, ಸತ್ಯನಾರಾಯಣ ಪೂಜೆಯ ಮೂಲಕ ಶಾಸ್ತ್ರೋಕ್ತ ಗೃಹ ಪ್ರವೇಶ ಕಾರ್ಯಕ್ರಮ ಉಚಿತವಾಗಿ ನೆರವೇರಿಸಿದರು.
ಟೀಂ‌ ನರೇಂದ್ರ ತಂಡದ ಸೇವಾಕಾರ್ಯವನ್ನು ತಿಳಿದ ಪುತ್ತೂರಿನ‌ ಶಾಸಕರಾದ ಸಂಜೀವ ಮಠಂದೂರು  ಸ್ಥಳಕ್ಕಾಗಮಿಸಿ ಯುವಕರ ಕಾರ್ಯವನ್ನು ಶ್ಲಾಘಿಸಿ‌ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ‌ ಸಂದರ್ಭದಲ್ಲಿ ಚಣಿಲ ತಿಮ್ಮಪ್ಪ ಶೆಟ್ಟಿ, ದಾನಿಗಳಾದ ರವೀಂದ್ರ (ದೇವ ಟ್ರೇಡರ್ಸ್ ಪುತ್ತೂರು), ಡಾ. ಅಡಿಗ, ಡಾ ಭಾಸ್ಕರ ರಾವ್, ಟೀಮ್ ನರೇಂದ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ವಾಗ್ಲೆ, ಕಾರ್ಯದರ್ಶಿ ಡಾ. ಸುರೇಶ್ ಪುತ್ತೂರಾಯ, ಕಾರ್ಯಕರ್ತರಾದ ಸುರೇಶ್ ಕಲ್ಲಾರೆ, ಜಿ. ಕೃಷ್ಣ, ಮನೋಜ್ ಪಡ್ಡಾಯೂರು, ಅಶ್ವತ್ಥ್ ಮೊದಲಾದವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

6 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago