Advertisement
ವಿಶೇಷ ವರದಿಗಳು

ಸೂರಿಲ್ಲದ‌ ಬಡ ಕುಟುಂಬಕ್ಕೆ ಆಸರೆಯಾದ ಟೀಂ ನರೇಂದ್ರ ಪುತ್ತೂರು

Share
ಪುತ್ತೂರು: ಸಮಾಜ ಸೇವೆಯ ಮೂಲಕ ರಾಷ್ಟ‌ಕಟ್ಟುವ ಧ್ಯೇಯವನ್ನು ಅಳವಡಿಸಿಕೊಂಡು ರಚನೆಯಾದ ಟೀಂ ನರೇಂದ್ರ ಪುತ್ತೂರು ತಂಡವು ಸೂರಿಲ್ಲದ ಕುಟುಂಬವೊಂದಕ್ಕೆ ದಾನಿಗಳ ಸಹಕಾರದಿಂದ ಮನೆಯೊಂದನ್ನು ಕಟ್ಟಿಕೊಟ್ಟಿದೆ.
ನಾಲ್ಕು ಹೆಣ್ಣುಮಕ್ಕಳು ಮತ್ತು ಓರ್ವ ಪುತ್ರನನ್ನು ಹೊಂದಿರುವ ವಿಟ್ಲ ಸಮೀಪದ ಪೆರುವಾಯಿಯ‌ ಐತ್ತಪ್ಪ ನಾಯ್ಕ್ ದಂಪತಿಗಳದ್ದು ಪುಟ್ಟ ಡೇರೆಯೊಳಗೆ ವಾಸ. ಬಯಲಿನಲ್ಲೇ‌ ಶೌಚ, ‌ಸ್ನಾನಕ್ಕೆ ಮನೆ ಪಕ್ಕದ ತೋಡಿನ ಆಶ್ರಯ. ಇಂತಹ ಪರಿಸ್ಥಿತಿಯಲ್ಲಿದ್ದ ಬಡ ಕುಟುಂಬಕ್ಕೆ ಕೂಲಿ ಕೆಲಸದ ಮೂಲಕ ಏಕಮಾತ್ರ ಆಧಾರವಾಗಿದ್ದ ಮಗ ಮರದಿಂದ ಬಿದ್ದು ಸೊಂಟದಿಂದ ಕೆಳಗೆ ನಿಶ್ಯಕ್ತಿಯಿಂದಾಗಿ ನೆಲ ಬಿಟ್ಟು ಮೇಲೇಳಲಾಗದ್ದು ಮತ್ತೊಂದು ಆಘಾತ. ಇವರ ಮನಕಲಕುವ ಘಟನೆಯನ್ನು ತಿಳಿದು ನೆರವಾಗಲು ಮುಂದಾದದ್ದು ಪುತ್ತೂರಿನ ಟೀಂ ನರೇಂದ್ರ ‌ತಂಡ.
ಟೀಂ ನರೇಂದ್ರ ತಂಡದ ಅಧ್ಯಕ್ಷರಾದ ಸಂತೋಷ್ ಕುಮಾರ್ ವಾಗ್ಲೆ ಅವರ ನೇತೃತ್ವದ ಪದಾಧಿಕಾರಿಗಳ ತಂಡವು ದಾನಿಗಳ ಸಹಕಾರದಿಂದ ಕಟ್ಟಿದ ಸುಸಜ್ಜಿತವಾದ ಮನೆಯು ಇದೀಗ ಗೃಹ ಪ್ರವೇಶವನ್ನೂ ಮುಗಿಸಿ‌ ಕುಟುಂಬದ ಸದಸ್ಯರ ವಾಸಕ್ಕೆ ಲಭ್ಯವಾಗಿದೆ. ಅ.30 ರಂದು  ಮಾಣಿಲ ಶ್ರೀಧಾಮದ  ಶ್ರೀ ಮೋಹನದಾಸ ಸ್ವಾಮೀಜಿಯವರು ದೀಪ ಬೆಳಗಿಸುವುದರ ಮೂಲಕ ಹಸ್ತಾಂತರಿಸಲ್ಪಟ್ಟ ಹೊಸಮನೆಯಲ್ಲಿ ಟೀ ನರೇಂದ್ರದ ಖಜಾಂಜಿ ವೇ.ಮೂ.ಶ್ರೀಕೃಷ್ಣ ‌ಉಪಾಧ್ಯಾಯರು ಪೌರೋಹಿತ್ಯದಲ್ಲಿ ಗಣಪತಿ ಹವನ, ಸತ್ಯನಾರಾಯಣ ಪೂಜೆಯ ಮೂಲಕ ಶಾಸ್ತ್ರೋಕ್ತ ಗೃಹ ಪ್ರವೇಶ ಕಾರ್ಯಕ್ರಮ ಉಚಿತವಾಗಿ ನೆರವೇರಿಸಿದರು.
ಟೀಂ‌ ನರೇಂದ್ರ ತಂಡದ ಸೇವಾಕಾರ್ಯವನ್ನು ತಿಳಿದ ಪುತ್ತೂರಿನ‌ ಶಾಸಕರಾದ ಸಂಜೀವ ಮಠಂದೂರು  ಸ್ಥಳಕ್ಕಾಗಮಿಸಿ ಯುವಕರ ಕಾರ್ಯವನ್ನು ಶ್ಲಾಘಿಸಿ‌ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ‌ ಸಂದರ್ಭದಲ್ಲಿ ಚಣಿಲ ತಿಮ್ಮಪ್ಪ ಶೆಟ್ಟಿ, ದಾನಿಗಳಾದ ರವೀಂದ್ರ (ದೇವ ಟ್ರೇಡರ್ಸ್ ಪುತ್ತೂರು), ಡಾ. ಅಡಿಗ, ಡಾ ಭಾಸ್ಕರ ರಾವ್, ಟೀಮ್ ನರೇಂದ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ವಾಗ್ಲೆ, ಕಾರ್ಯದರ್ಶಿ ಡಾ. ಸುರೇಶ್ ಪುತ್ತೂರಾಯ, ಕಾರ್ಯಕರ್ತರಾದ ಸುರೇಶ್ ಕಲ್ಲಾರೆ, ಜಿ. ಕೃಷ್ಣ, ಮನೋಜ್ ಪಡ್ಡಾಯೂರು, ಅಶ್ವತ್ಥ್ ಮೊದಲಾದವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

6 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

7 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

14 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

15 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 day ago