Advertisement
ಸುದ್ದಿಗಳು

ಸೂರ್ಯಗ್ರಹಣ ವೀಕ್ಷಣೆಯ ತವಕ ಹಲವು ಕಡೆ : ಮಾನಸಿಕ ನೆಮ್ಮದಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಶಾಂತಿಹವನ

Share

ಮಂಗಳೂರು: ಸೌರಮಂಡಲದ ಅಪರೂಪದ ಕ್ಷಣಗಳು ಈಗ ಕಾಣುತ್ತಿವೆ. ಅತ್ಯಂತ ಅಪರೂಪ ಎನಿಸಿದ ಕಂಕಣ ಸೂರ್ಯಗ್ರಹಣ ಕರಾವಳಿ ಭಾಗದಲ್ಲಿ  ಸ್ಪಷ್ಟವಾಗಿ ಗೋಚರಿಸಿದೆ. ಬೆಳಗ್ಗೆ 8:06 ಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣ 11.11 ಕ್ಕೆ ಮುಕ್ತಾಯಗೊಳ್ಳಲಿದೆ. ಸೂರ್ಯ ಬಳೆ ರೀತಿಯಲ್ಲಿ ಸುಮಾರು 9.24 ರಿಂದ 9.29 ರವರೆಗೆ ಹಲವು ಕಡೆ ಕಂಡುಬಂದಿದೆ.  ಮಂಗಳೂರು ಸೇರಿದಂತೆ ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯಗ್ರಹಣ ಗೋಚರಿಸುತ್ತಿದೆ. ಇದೇ ವೇಳೆ ಮಾನಸಿಕ ನೆಮ್ಮದಿಗಾಗಿ, ದೋಷ ನಿವಾರಣೆಗಾಗಿ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯುತ್ತಿದೆ.

Advertisement

ಬಹಳ ಅಪರೂಪವಾದ ಈ ಸೂರ್ಯಗ್ರಹಣ  ಬೆಳಿಗ್ಗೆ 9 ರ ಸುಮಾರಿಗೆ ದರ್ಶನವಾಗಿದೆ. ಬಳಿಕ ಸ್ಪಷ್ಟವಾಗಿ ಗೋಚರಿಸುತ್ತಿದೆ.  ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ.

ಕಂಕಣ ಸೂರ್ಯಗ್ರಹಣ ಏನಿದು  ? : ಸೂರ್ಯ, ಭೂಮಿಯ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಕಂಕಣ ಗ್ರಹಣದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆ ಮಾಡುವುದಿಲ್ಲ. ಗ್ರಹಣವಾದಾಗ ಚಂದ್ರನ ಸೂತ್ತಲೂ ಬೆಳಕು ತೂರಿ ಬಂದು ಹೊಳೆಯುವ ಬಂಗಾರದ ಬಳೆಯಾಕಾರದಲ್ಲಿ ಸೂರ್ಯ ಗೋಚರಿಸುತ್ತಾನೆ. ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ಅಂತರಗಳ ಪ್ರಕಾರ ಸೂರ್ಯನ ಕೋನೀಯ ಗಾತ್ರವು ಚಂದ್ರನದಕ್ಕಿಂತ ದೊಡ್ಡದಾಗಿರುತ್ತದೆ. ಹಾಗಾಗಿ ಸೂರ್ಯ ಬಳೆಯಂತೆ ಗೋಚರಿಸುತ್ತಾನೆ. ಈ  ಕೌತುಕ  ತಮಿಳುನಾಡು, ಕೇರಳ, ಕರ್ನಾಟಕ ಭಾಗಗಳಲ್ಲಷ್ಟೇ  ದರ್ಶನ ಸಾಧ್ಯವಿದೆ.

ಶಾಂತಿಹವನ : ಸೂರ್ಯಗ್ರಹಣದಿಂದ ಮೂಲ ನಕ್ಷತ್ರ ಸೇರಿದಂತೆ ವಿವಿಧ ರಾಶಿಯವರಿಗೆ ದೋಚ ಇರುವುದರಿಂದ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆ ಶ್ರೀ ಶಂಖಪಾಲ  ಸುಬ್ರಹ್ಮಣ್ಯ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಹರಿಹರ ದೇವಸ್ಥಾನ, ಬೆಳ್ಳಾರೆ, ಕಾಯರ್ತೋಡಿ, ತೊಡಿಕಾನ, ಕಾಂತಮಂಗಲ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

4 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

10 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

15 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

15 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

15 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago