Advertisement
ಸುದ್ದಿಗಳು

ಸೂರ್ಯಗ್ರಹಣ ವೀಕ್ಷಣೆಯ ತವಕ ಹಲವು ಕಡೆ : ಮಾನಸಿಕ ನೆಮ್ಮದಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಶಾಂತಿಹವನ

Share

ಮಂಗಳೂರು: ಸೌರಮಂಡಲದ ಅಪರೂಪದ ಕ್ಷಣಗಳು ಈಗ ಕಾಣುತ್ತಿವೆ. ಅತ್ಯಂತ ಅಪರೂಪ ಎನಿಸಿದ ಕಂಕಣ ಸೂರ್ಯಗ್ರಹಣ ಕರಾವಳಿ ಭಾಗದಲ್ಲಿ  ಸ್ಪಷ್ಟವಾಗಿ ಗೋಚರಿಸಿದೆ. ಬೆಳಗ್ಗೆ 8:06 ಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣ 11.11 ಕ್ಕೆ ಮುಕ್ತಾಯಗೊಳ್ಳಲಿದೆ. ಸೂರ್ಯ ಬಳೆ ರೀತಿಯಲ್ಲಿ ಸುಮಾರು 9.24 ರಿಂದ 9.29 ರವರೆಗೆ ಹಲವು ಕಡೆ ಕಂಡುಬಂದಿದೆ.  ಮಂಗಳೂರು ಸೇರಿದಂತೆ ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯಗ್ರಹಣ ಗೋಚರಿಸುತ್ತಿದೆ. ಇದೇ ವೇಳೆ ಮಾನಸಿಕ ನೆಮ್ಮದಿಗಾಗಿ, ದೋಷ ನಿವಾರಣೆಗಾಗಿ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯುತ್ತಿದೆ.

Advertisement
Advertisement

ಬಹಳ ಅಪರೂಪವಾದ ಈ ಸೂರ್ಯಗ್ರಹಣ  ಬೆಳಿಗ್ಗೆ 9 ರ ಸುಮಾರಿಗೆ ದರ್ಶನವಾಗಿದೆ. ಬಳಿಕ ಸ್ಪಷ್ಟವಾಗಿ ಗೋಚರಿಸುತ್ತಿದೆ.  ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ.

ಕಂಕಣ ಸೂರ್ಯಗ್ರಹಣ ಏನಿದು  ? : ಸೂರ್ಯ, ಭೂಮಿಯ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಕಂಕಣ ಗ್ರಹಣದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆ ಮಾಡುವುದಿಲ್ಲ. ಗ್ರಹಣವಾದಾಗ ಚಂದ್ರನ ಸೂತ್ತಲೂ ಬೆಳಕು ತೂರಿ ಬಂದು ಹೊಳೆಯುವ ಬಂಗಾರದ ಬಳೆಯಾಕಾರದಲ್ಲಿ ಸೂರ್ಯ ಗೋಚರಿಸುತ್ತಾನೆ. ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ಅಂತರಗಳ ಪ್ರಕಾರ ಸೂರ್ಯನ ಕೋನೀಯ ಗಾತ್ರವು ಚಂದ್ರನದಕ್ಕಿಂತ ದೊಡ್ಡದಾಗಿರುತ್ತದೆ. ಹಾಗಾಗಿ ಸೂರ್ಯ ಬಳೆಯಂತೆ ಗೋಚರಿಸುತ್ತಾನೆ. ಈ  ಕೌತುಕ  ತಮಿಳುನಾಡು, ಕೇರಳ, ಕರ್ನಾಟಕ ಭಾಗಗಳಲ್ಲಷ್ಟೇ  ದರ್ಶನ ಸಾಧ್ಯವಿದೆ.

ಶಾಂತಿಹವನ : ಸೂರ್ಯಗ್ರಹಣದಿಂದ ಮೂಲ ನಕ್ಷತ್ರ ಸೇರಿದಂತೆ ವಿವಿಧ ರಾಶಿಯವರಿಗೆ ದೋಚ ಇರುವುದರಿಂದ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆ ಶ್ರೀ ಶಂಖಪಾಲ  ಸುಬ್ರಹ್ಮಣ್ಯ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಹರಿಹರ ದೇವಸ್ಥಾನ, ಬೆಳ್ಳಾರೆ, ಕಾಯರ್ತೋಡಿ, ತೊಡಿಕಾನ, ಕಾಂತಮಂಗಲ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

3 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

3 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

13 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

13 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

13 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

14 hours ago