Advertisement
ಸುದ್ದಿಗಳು

ಸೂರ್ಯಗ್ರಹಣ ವೀಕ್ಷಣೆಯ ತವಕ ಹಲವು ಕಡೆ : ಮಾನಸಿಕ ನೆಮ್ಮದಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಶಾಂತಿಹವನ

Share

ಮಂಗಳೂರು: ಸೌರಮಂಡಲದ ಅಪರೂಪದ ಕ್ಷಣಗಳು ಈಗ ಕಾಣುತ್ತಿವೆ. ಅತ್ಯಂತ ಅಪರೂಪ ಎನಿಸಿದ ಕಂಕಣ ಸೂರ್ಯಗ್ರಹಣ ಕರಾವಳಿ ಭಾಗದಲ್ಲಿ  ಸ್ಪಷ್ಟವಾಗಿ ಗೋಚರಿಸಿದೆ. ಬೆಳಗ್ಗೆ 8:06 ಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣ 11.11 ಕ್ಕೆ ಮುಕ್ತಾಯಗೊಳ್ಳಲಿದೆ. ಸೂರ್ಯ ಬಳೆ ರೀತಿಯಲ್ಲಿ ಸುಮಾರು 9.24 ರಿಂದ 9.29 ರವರೆಗೆ ಹಲವು ಕಡೆ ಕಂಡುಬಂದಿದೆ.  ಮಂಗಳೂರು ಸೇರಿದಂತೆ ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯಗ್ರಹಣ ಗೋಚರಿಸುತ್ತಿದೆ. ಇದೇ ವೇಳೆ ಮಾನಸಿಕ ನೆಮ್ಮದಿಗಾಗಿ, ದೋಷ ನಿವಾರಣೆಗಾಗಿ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯುತ್ತಿದೆ.

ಬಹಳ ಅಪರೂಪವಾದ ಈ ಸೂರ್ಯಗ್ರಹಣ  ಬೆಳಿಗ್ಗೆ 9 ರ ಸುಮಾರಿಗೆ ದರ್ಶನವಾಗಿದೆ. ಬಳಿಕ ಸ್ಪಷ್ಟವಾಗಿ ಗೋಚರಿಸುತ್ತಿದೆ.  ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ.

ಕಂಕಣ ಸೂರ್ಯಗ್ರಹಣ ಏನಿದು  ? : ಸೂರ್ಯ, ಭೂಮಿಯ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಕಂಕಣ ಗ್ರಹಣದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆ ಮಾಡುವುದಿಲ್ಲ. ಗ್ರಹಣವಾದಾಗ ಚಂದ್ರನ ಸೂತ್ತಲೂ ಬೆಳಕು ತೂರಿ ಬಂದು ಹೊಳೆಯುವ ಬಂಗಾರದ ಬಳೆಯಾಕಾರದಲ್ಲಿ ಸೂರ್ಯ ಗೋಚರಿಸುತ್ತಾನೆ. ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ಅಂತರಗಳ ಪ್ರಕಾರ ಸೂರ್ಯನ ಕೋನೀಯ ಗಾತ್ರವು ಚಂದ್ರನದಕ್ಕಿಂತ ದೊಡ್ಡದಾಗಿರುತ್ತದೆ. ಹಾಗಾಗಿ ಸೂರ್ಯ ಬಳೆಯಂತೆ ಗೋಚರಿಸುತ್ತಾನೆ. ಈ  ಕೌತುಕ  ತಮಿಳುನಾಡು, ಕೇರಳ, ಕರ್ನಾಟಕ ಭಾಗಗಳಲ್ಲಷ್ಟೇ  ದರ್ಶನ ಸಾಧ್ಯವಿದೆ.

ಶಾಂತಿಹವನ : ಸೂರ್ಯಗ್ರಹಣದಿಂದ ಮೂಲ ನಕ್ಷತ್ರ ಸೇರಿದಂತೆ ವಿವಿಧ ರಾಶಿಯವರಿಗೆ ದೋಚ ಇರುವುದರಿಂದ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆ ಶ್ರೀ ಶಂಖಪಾಲ  ಸುಬ್ರಹ್ಮಣ್ಯ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಹರಿಹರ ದೇವಸ್ಥಾನ, ಬೆಳ್ಳಾರೆ, ಕಾಯರ್ತೋಡಿ, ತೊಡಿಕಾನ, ಕಾಂತಮಂಗಲ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

4 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

9 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

16 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

17 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

17 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago