Advertisement
ಸುದ್ದಿಗಳು

ಸೂರ್ಯಗ್ರಹಣ ವೀಕ್ಷಣೆಯ ತವಕ ಹಲವು ಕಡೆ : ಮಾನಸಿಕ ನೆಮ್ಮದಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಶಾಂತಿಹವನ

Share

ಮಂಗಳೂರು: ಸೌರಮಂಡಲದ ಅಪರೂಪದ ಕ್ಷಣಗಳು ಈಗ ಕಾಣುತ್ತಿವೆ. ಅತ್ಯಂತ ಅಪರೂಪ ಎನಿಸಿದ ಕಂಕಣ ಸೂರ್ಯಗ್ರಹಣ ಕರಾವಳಿ ಭಾಗದಲ್ಲಿ  ಸ್ಪಷ್ಟವಾಗಿ ಗೋಚರಿಸಿದೆ. ಬೆಳಗ್ಗೆ 8:06 ಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣ 11.11 ಕ್ಕೆ ಮುಕ್ತಾಯಗೊಳ್ಳಲಿದೆ. ಸೂರ್ಯ ಬಳೆ ರೀತಿಯಲ್ಲಿ ಸುಮಾರು 9.24 ರಿಂದ 9.29 ರವರೆಗೆ ಹಲವು ಕಡೆ ಕಂಡುಬಂದಿದೆ.  ಮಂಗಳೂರು ಸೇರಿದಂತೆ ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯಗ್ರಹಣ ಗೋಚರಿಸುತ್ತಿದೆ. ಇದೇ ವೇಳೆ ಮಾನಸಿಕ ನೆಮ್ಮದಿಗಾಗಿ, ದೋಷ ನಿವಾರಣೆಗಾಗಿ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯುತ್ತಿದೆ.

ಬಹಳ ಅಪರೂಪವಾದ ಈ ಸೂರ್ಯಗ್ರಹಣ  ಬೆಳಿಗ್ಗೆ 9 ರ ಸುಮಾರಿಗೆ ದರ್ಶನವಾಗಿದೆ. ಬಳಿಕ ಸ್ಪಷ್ಟವಾಗಿ ಗೋಚರಿಸುತ್ತಿದೆ.  ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ.

ಕಂಕಣ ಸೂರ್ಯಗ್ರಹಣ ಏನಿದು  ? : ಸೂರ್ಯ, ಭೂಮಿಯ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಕಂಕಣ ಗ್ರಹಣದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆ ಮಾಡುವುದಿಲ್ಲ. ಗ್ರಹಣವಾದಾಗ ಚಂದ್ರನ ಸೂತ್ತಲೂ ಬೆಳಕು ತೂರಿ ಬಂದು ಹೊಳೆಯುವ ಬಂಗಾರದ ಬಳೆಯಾಕಾರದಲ್ಲಿ ಸೂರ್ಯ ಗೋಚರಿಸುತ್ತಾನೆ. ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ಅಂತರಗಳ ಪ್ರಕಾರ ಸೂರ್ಯನ ಕೋನೀಯ ಗಾತ್ರವು ಚಂದ್ರನದಕ್ಕಿಂತ ದೊಡ್ಡದಾಗಿರುತ್ತದೆ. ಹಾಗಾಗಿ ಸೂರ್ಯ ಬಳೆಯಂತೆ ಗೋಚರಿಸುತ್ತಾನೆ. ಈ  ಕೌತುಕ  ತಮಿಳುನಾಡು, ಕೇರಳ, ಕರ್ನಾಟಕ ಭಾಗಗಳಲ್ಲಷ್ಟೇ  ದರ್ಶನ ಸಾಧ್ಯವಿದೆ.

ಶಾಂತಿಹವನ : ಸೂರ್ಯಗ್ರಹಣದಿಂದ ಮೂಲ ನಕ್ಷತ್ರ ಸೇರಿದಂತೆ ವಿವಿಧ ರಾಶಿಯವರಿಗೆ ದೋಚ ಇರುವುದರಿಂದ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆ ಶ್ರೀ ಶಂಖಪಾಲ  ಸುಬ್ರಹ್ಮಣ್ಯ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಹರಿಹರ ದೇವಸ್ಥಾನ, ಬೆಳ್ಳಾರೆ, ಕಾಯರ್ತೋಡಿ, ತೊಡಿಕಾನ, ಕಾಂತಮಂಗಲ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

21 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago