Advertisement
ಸುದ್ದಿಗಳು

ಸೂರ್ಯಗ್ರಹಣ ವೀಕ್ಷಣೆಯ ತವಕ ಹಲವು ಕಡೆ : ಮಾನಸಿಕ ನೆಮ್ಮದಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಶಾಂತಿಹವನ

Share

ಮಂಗಳೂರು: ಸೌರಮಂಡಲದ ಅಪರೂಪದ ಕ್ಷಣಗಳು ಈಗ ಕಾಣುತ್ತಿವೆ. ಅತ್ಯಂತ ಅಪರೂಪ ಎನಿಸಿದ ಕಂಕಣ ಸೂರ್ಯಗ್ರಹಣ ಕರಾವಳಿ ಭಾಗದಲ್ಲಿ  ಸ್ಪಷ್ಟವಾಗಿ ಗೋಚರಿಸಿದೆ. ಬೆಳಗ್ಗೆ 8:06 ಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣ 11.11 ಕ್ಕೆ ಮುಕ್ತಾಯಗೊಳ್ಳಲಿದೆ. ಸೂರ್ಯ ಬಳೆ ರೀತಿಯಲ್ಲಿ ಸುಮಾರು 9.24 ರಿಂದ 9.29 ರವರೆಗೆ ಹಲವು ಕಡೆ ಕಂಡುಬಂದಿದೆ.  ಮಂಗಳೂರು ಸೇರಿದಂತೆ ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯಗ್ರಹಣ ಗೋಚರಿಸುತ್ತಿದೆ. ಇದೇ ವೇಳೆ ಮಾನಸಿಕ ನೆಮ್ಮದಿಗಾಗಿ, ದೋಷ ನಿವಾರಣೆಗಾಗಿ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯುತ್ತಿದೆ.

ಬಹಳ ಅಪರೂಪವಾದ ಈ ಸೂರ್ಯಗ್ರಹಣ  ಬೆಳಿಗ್ಗೆ 9 ರ ಸುಮಾರಿಗೆ ದರ್ಶನವಾಗಿದೆ. ಬಳಿಕ ಸ್ಪಷ್ಟವಾಗಿ ಗೋಚರಿಸುತ್ತಿದೆ.  ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ.

ಕಂಕಣ ಸೂರ್ಯಗ್ರಹಣ ಏನಿದು  ? : ಸೂರ್ಯ, ಭೂಮಿಯ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಕಂಕಣ ಗ್ರಹಣದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆ ಮಾಡುವುದಿಲ್ಲ. ಗ್ರಹಣವಾದಾಗ ಚಂದ್ರನ ಸೂತ್ತಲೂ ಬೆಳಕು ತೂರಿ ಬಂದು ಹೊಳೆಯುವ ಬಂಗಾರದ ಬಳೆಯಾಕಾರದಲ್ಲಿ ಸೂರ್ಯ ಗೋಚರಿಸುತ್ತಾನೆ. ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ಅಂತರಗಳ ಪ್ರಕಾರ ಸೂರ್ಯನ ಕೋನೀಯ ಗಾತ್ರವು ಚಂದ್ರನದಕ್ಕಿಂತ ದೊಡ್ಡದಾಗಿರುತ್ತದೆ. ಹಾಗಾಗಿ ಸೂರ್ಯ ಬಳೆಯಂತೆ ಗೋಚರಿಸುತ್ತಾನೆ. ಈ  ಕೌತುಕ  ತಮಿಳುನಾಡು, ಕೇರಳ, ಕರ್ನಾಟಕ ಭಾಗಗಳಲ್ಲಷ್ಟೇ  ದರ್ಶನ ಸಾಧ್ಯವಿದೆ.

ಶಾಂತಿಹವನ : ಸೂರ್ಯಗ್ರಹಣದಿಂದ ಮೂಲ ನಕ್ಷತ್ರ ಸೇರಿದಂತೆ ವಿವಿಧ ರಾಶಿಯವರಿಗೆ ದೋಚ ಇರುವುದರಿಂದ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆ ಶ್ರೀ ಶಂಖಪಾಲ  ಸುಬ್ರಹ್ಮಣ್ಯ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಹರಿಹರ ದೇವಸ್ಥಾನ, ಬೆಳ್ಳಾರೆ, ಕಾಯರ್ತೋಡಿ, ತೊಡಿಕಾನ, ಕಾಂತಮಂಗಲ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

8 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

8 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

8 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

15 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago