Advertisement
ಸುದ್ದಿಗಳು

ಸೂರ್ಯಗ್ರಹಣ ವೀಕ್ಷಣೆಯ ತವಕ ಹಲವು ಕಡೆ : ಮಾನಸಿಕ ನೆಮ್ಮದಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಶಾಂತಿಹವನ

Share

ಮಂಗಳೂರು: ಸೌರಮಂಡಲದ ಅಪರೂಪದ ಕ್ಷಣಗಳು ಈಗ ಕಾಣುತ್ತಿವೆ. ಅತ್ಯಂತ ಅಪರೂಪ ಎನಿಸಿದ ಕಂಕಣ ಸೂರ್ಯಗ್ರಹಣ ಕರಾವಳಿ ಭಾಗದಲ್ಲಿ  ಸ್ಪಷ್ಟವಾಗಿ ಗೋಚರಿಸಿದೆ. ಬೆಳಗ್ಗೆ 8:06 ಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣ 11.11 ಕ್ಕೆ ಮುಕ್ತಾಯಗೊಳ್ಳಲಿದೆ. ಸೂರ್ಯ ಬಳೆ ರೀತಿಯಲ್ಲಿ ಸುಮಾರು 9.24 ರಿಂದ 9.29 ರವರೆಗೆ ಹಲವು ಕಡೆ ಕಂಡುಬಂದಿದೆ.  ಮಂಗಳೂರು ಸೇರಿದಂತೆ ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯಗ್ರಹಣ ಗೋಚರಿಸುತ್ತಿದೆ. ಇದೇ ವೇಳೆ ಮಾನಸಿಕ ನೆಮ್ಮದಿಗಾಗಿ, ದೋಷ ನಿವಾರಣೆಗಾಗಿ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯುತ್ತಿದೆ.

ಬಹಳ ಅಪರೂಪವಾದ ಈ ಸೂರ್ಯಗ್ರಹಣ  ಬೆಳಿಗ್ಗೆ 9 ರ ಸುಮಾರಿಗೆ ದರ್ಶನವಾಗಿದೆ. ಬಳಿಕ ಸ್ಪಷ್ಟವಾಗಿ ಗೋಚರಿಸುತ್ತಿದೆ.  ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ.

ಕಂಕಣ ಸೂರ್ಯಗ್ರಹಣ ಏನಿದು  ? : ಸೂರ್ಯ, ಭೂಮಿಯ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಕಂಕಣ ಗ್ರಹಣದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆ ಮಾಡುವುದಿಲ್ಲ. ಗ್ರಹಣವಾದಾಗ ಚಂದ್ರನ ಸೂತ್ತಲೂ ಬೆಳಕು ತೂರಿ ಬಂದು ಹೊಳೆಯುವ ಬಂಗಾರದ ಬಳೆಯಾಕಾರದಲ್ಲಿ ಸೂರ್ಯ ಗೋಚರಿಸುತ್ತಾನೆ. ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ಅಂತರಗಳ ಪ್ರಕಾರ ಸೂರ್ಯನ ಕೋನೀಯ ಗಾತ್ರವು ಚಂದ್ರನದಕ್ಕಿಂತ ದೊಡ್ಡದಾಗಿರುತ್ತದೆ. ಹಾಗಾಗಿ ಸೂರ್ಯ ಬಳೆಯಂತೆ ಗೋಚರಿಸುತ್ತಾನೆ. ಈ  ಕೌತುಕ  ತಮಿಳುನಾಡು, ಕೇರಳ, ಕರ್ನಾಟಕ ಭಾಗಗಳಲ್ಲಷ್ಟೇ  ದರ್ಶನ ಸಾಧ್ಯವಿದೆ.

ಶಾಂತಿಹವನ : ಸೂರ್ಯಗ್ರಹಣದಿಂದ ಮೂಲ ನಕ್ಷತ್ರ ಸೇರಿದಂತೆ ವಿವಿಧ ರಾಶಿಯವರಿಗೆ ದೋಚ ಇರುವುದರಿಂದ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆ ಶ್ರೀ ಶಂಖಪಾಲ  ಸುಬ್ರಹ್ಮಣ್ಯ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಹರಿಹರ ದೇವಸ್ಥಾನ, ಬೆಳ್ಳಾರೆ, ಕಾಯರ್ತೋಡಿ, ತೊಡಿಕಾನ, ಕಾಂತಮಂಗಲ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

2 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

2 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

3 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

3 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

3 hours ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

12 hours ago