ಸುದ್ದಿಗಳು

ಸೆ‌.15 ರಂದು ಗುತ್ತಿಗಾರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: 2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.15 ರಂದು ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಯುವಕ- ಯುವತಿಯರು/ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ಸಹಾಯಕ ಯುವ ಸಬಲೀಕರಣ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಕ್ರೀಡಾಕೂಟದಲ್ಲಿಮಹಿಳೆಯರಿಗೆ ಮತ್ತು ಪುರುಷರಿಗೆ ನಡೆಯುವ ಸ್ಪರ್ಧೆಗಳು:

ಪಂದ್ಯಾಟಗಳು:
ಕಬಡ್ಡಿ, ಖೋ-ಖೋ,ವಾಲಿಬಾಲ್
ಅಥ್ಲೆಟಿಕ್ಸ್: 100ಮೀ, 200 ಮೀ, 400 ಮೀ, 800 ಮೀ, 1500 ಮೀ, (5000 ಮೀ ಪುರುಷರಿಗೆ ಮಾತ್ರ,3000 ಮೀ ಮಹಿಳೆಯರಿಗೆ ಮಾತ್ರ) ಶಾಟ್ ಫುಟ್,ಉದ್ದಜಿಗಿತ,ಎತ್ತರ ಜಿಗಿತ,ಜಾವೆಲಿನ್ ಎಸೆತ,ಡಿಸ್ಕಸ್ ಎಸೆತ,ಟ್ರಿಪಲ್ ಜಂಪ್,4*100 ಮೀ ರಿಲೇ,110 ಮೀ ಹರ್ಡಲ್ಸ್, (5000ಮೀ ಮತ್ತು 3000 ಮೀ ಓಟಗಳು ಪೂ.9.00 ಕ್ಕೆ ಸರಿಯಾಗಿ ನಡೆಯುವುದು).

ಭಾಗವಹಿಸುವ ಸ್ಪರ್ಧಾಳುಗಳು ತಮ್ಮ ತಂಡದ ಸದಸ್ಯರ ಪಟ್ಟಿಯನ್ನು ಯುವಕ/ಯುವತಿ ಮಂಡಲದ ಅಧ್ಯಕ್ಷರಿಂದ ಧೃಡೀಕರಿಸಿ ಕಾಲೇಜು/ ಹೈಸ್ಕೂಲ್ ವಿದ್ಯಾರ್ಥಿಗಳಾಗಿದ್ದಲ್ಲಿ ಪ್ರಾಚಾರ್ಯರಿಂದ ಅಥವಾ ಮುಖ್ಯ ಗುರುಗಳಿಂದ ದೃಢೀಕರಿಸಿ ಗುತ್ತಿಗಾರು ಸ.ಪ.ಪೂ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮೇದಪ್ಪ(8762919932) ಇವರಿಗೆ ಕಳುಹಿಸಿ ಕೊಡತಕ್ಕದ್ದು. ಉದ್ಘಾಟನಾ ಕಾರ್ಯಕ್ರಮಕ್ಕಿಂತ ಮೊದಲು ಓಟಗಳು ಮತ್ತು ಪಂದ್ಯಾಟಗಳನ್ನು ಪ್ರಾರಂಬಿಸಲಾಗುವುದು.

Advertisement

ಫುಟ್ ಬಾಲ್:
ಸೆ.14 ರಂದು ದಸರಾ ಫುಟ್ ಬಾಲ್ ಪಂದ್ಯಾಟವನ್ನು ಮರ್ಕಂಜದ ಸರಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಭಾಗವಹಿಸುವ ತಂಡದವರು ಪೂರ್ವಾಹ್ನ 9.00 ರ ಒಳಗಾಗಿ ಸ್ಥಳದಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.ನಂತರ ಬಂದವರಿಗೆ ಅವಕಾಶವಿರುವುದಿಲ್ಲ. ದಸರಾ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಹ್ಯಾಂಡ್ ಬಾಲ್,ಹಾಕಿ,ಈಜು, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ವೈಟ್ ಲಿಫ್ಟಿಂಗ್ ಸ್ಪರ್ಧೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು.

Advertisement

ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯ ಪಾಸ್ ಬುಕ್,ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು.ಈ ಭಾರಿ ಪ್ರಯಾಣ ಭತ್ಯೆಯನ್ನು ನೇರವಾಗಿ ತಮ್ಮ ಖಾತೆಗೆ ಜಮೆ ಮಾಡಲಾಗುವುದು ಎಂದು ಸಹಾಯಕ ಯುವ ಸಬಲೀಕರಣ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

51 minutes ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

2 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago