Advertisement
ಸುದ್ದಿಗಳು

ಸೆ‌.15 ರಂದು ಗುತ್ತಿಗಾರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳು

Share

ಸುಳ್ಯ: 2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.15 ರಂದು ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಯುವಕ- ಯುವತಿಯರು/ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ಸಹಾಯಕ ಯುವ ಸಬಲೀಕರಣ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರೀಡಾಕೂಟದಲ್ಲಿಮಹಿಳೆಯರಿಗೆ ಮತ್ತು ಪುರುಷರಿಗೆ ನಡೆಯುವ ಸ್ಪರ್ಧೆಗಳು:

ಪಂದ್ಯಾಟಗಳು:
ಕಬಡ್ಡಿ, ಖೋ-ಖೋ,ವಾಲಿಬಾಲ್
ಅಥ್ಲೆಟಿಕ್ಸ್: 100ಮೀ, 200 ಮೀ, 400 ಮೀ, 800 ಮೀ, 1500 ಮೀ, (5000 ಮೀ ಪುರುಷರಿಗೆ ಮಾತ್ರ,3000 ಮೀ ಮಹಿಳೆಯರಿಗೆ ಮಾತ್ರ) ಶಾಟ್ ಫುಟ್,ಉದ್ದಜಿಗಿತ,ಎತ್ತರ ಜಿಗಿತ,ಜಾವೆಲಿನ್ ಎಸೆತ,ಡಿಸ್ಕಸ್ ಎಸೆತ,ಟ್ರಿಪಲ್ ಜಂಪ್,4*100 ಮೀ ರಿಲೇ,110 ಮೀ ಹರ್ಡಲ್ಸ್, (5000ಮೀ ಮತ್ತು 3000 ಮೀ ಓಟಗಳು ಪೂ.9.00 ಕ್ಕೆ ಸರಿಯಾಗಿ ನಡೆಯುವುದು).

ಭಾಗವಹಿಸುವ ಸ್ಪರ್ಧಾಳುಗಳು ತಮ್ಮ ತಂಡದ ಸದಸ್ಯರ ಪಟ್ಟಿಯನ್ನು ಯುವಕ/ಯುವತಿ ಮಂಡಲದ ಅಧ್ಯಕ್ಷರಿಂದ ಧೃಡೀಕರಿಸಿ ಕಾಲೇಜು/ ಹೈಸ್ಕೂಲ್ ವಿದ್ಯಾರ್ಥಿಗಳಾಗಿದ್ದಲ್ಲಿ ಪ್ರಾಚಾರ್ಯರಿಂದ ಅಥವಾ ಮುಖ್ಯ ಗುರುಗಳಿಂದ ದೃಢೀಕರಿಸಿ ಗುತ್ತಿಗಾರು ಸ.ಪ.ಪೂ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮೇದಪ್ಪ(8762919932) ಇವರಿಗೆ ಕಳುಹಿಸಿ ಕೊಡತಕ್ಕದ್ದು. ಉದ್ಘಾಟನಾ ಕಾರ್ಯಕ್ರಮಕ್ಕಿಂತ ಮೊದಲು ಓಟಗಳು ಮತ್ತು ಪಂದ್ಯಾಟಗಳನ್ನು ಪ್ರಾರಂಬಿಸಲಾಗುವುದು.

ಫುಟ್ ಬಾಲ್:
ಸೆ.14 ರಂದು ದಸರಾ ಫುಟ್ ಬಾಲ್ ಪಂದ್ಯಾಟವನ್ನು ಮರ್ಕಂಜದ ಸರಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಭಾಗವಹಿಸುವ ತಂಡದವರು ಪೂರ್ವಾಹ್ನ 9.00 ರ ಒಳಗಾಗಿ ಸ್ಥಳದಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.ನಂತರ ಬಂದವರಿಗೆ ಅವಕಾಶವಿರುವುದಿಲ್ಲ. ದಸರಾ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಹ್ಯಾಂಡ್ ಬಾಲ್,ಹಾಕಿ,ಈಜು, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ವೈಟ್ ಲಿಫ್ಟಿಂಗ್ ಸ್ಪರ್ಧೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು.

ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯ ಪಾಸ್ ಬುಕ್,ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು.ಈ ಭಾರಿ ಪ್ರಯಾಣ ಭತ್ಯೆಯನ್ನು ನೇರವಾಗಿ ತಮ್ಮ ಖಾತೆಗೆ ಜಮೆ ಮಾಡಲಾಗುವುದು ಎಂದು ಸಹಾಯಕ ಯುವ ಸಬಲೀಕರಣ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago