ಸುಳ್ಯ: ಸೆ. 1 ರಿಂದ ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ಆ.31 ರಂದು ಶನಿವಾರ ಅಪರಾಹ್ನ 3 ಗಂಟೆಗೆ ಪ್ಲಾಸ್ಟಿಕ್ ಮುಕ್ತ ಸುಳ್ಯ ಜಾಗೃತಿ ಅಭಿಯಾನ ನಡೆಯಲಿದೆ. ಸುಳ್ಯ ಹಳೆಗೇಟ್ ಭಾರತ್ ಪೆಟ್ರೋಲ್ ಪಂಪ್ ಬಳಿಯಿಂದ ಗಾಂಧೀನಗರ ಪೆಟ್ರೋಲ್ ಪಂಪ್ ವರೆಗೆ ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದಲ್ಲಿ ನಗರ ಪಂಚಾಯತ್ ನ ಸಹಭಾಗಿತ್ವದಲ್ಲಿ ಅಭಿಯಾನ ನಡೆಯಲಿದೆ.
ಪ್ಲಾಸ್ಟಿಕ್ ನಿಷೇಧದ ಹಿನ್ನಲೆಯಲ್ಲಿ ಅಂಗಡಿಗಳಿಗೆ ತೆರಳಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಸಾರ್ವಜನಿಕರು ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ನಡೆಯಲಿದೆ. ಸುಳ್ಯ ವರ್ತಕರ ಸಂಘ,ಸ್ವಚ್ಚ ನಗರ ಸುಳ್ಯ ತಂಡ ,ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ,ಯುವ ಬ್ರಿಗೆಡ್ ಸುಳ್ಯ, ನಗರದ ಶಾಲಾ ಕಾಲೇಜು ವಿದ್ಯಾರ್ಥಿಗಳು,ನಗರ ಪಂಚಯತ್ ,ಶಿಕ್ಷಣ ಇಲಾಖೆ,ಪತ್ರಕರ್ತರ ಸಂಘ, ಎಸ್.ಕೆ.ಎಸ್.ಎಸ್.ಎಫ್ ವಿಕಾಯ ತಂಡ ಸುಳ್ಯ, ಎಸ್.ಎಸ್.ಎಫ್ ತಂಡ, ರೆಡ್ ಕ್ರಾಸ್ ಸಂಘ ಸುಳ್ಯ, ಹಾಗು ಇನ್ನಿತರ ಸಂಘ ಸಂಸ್ಥೆ ಗಳ ಸಹಯೋಗದಲ್ಲಿ ಈ ಆಂದೋಲನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…