ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.
ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…