ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.
ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…