ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.
ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…