ಧಾರ್ಮಿಕ

ಸೆ.16 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾಪರಿಷತ್‍  ವತಿಯಿಂದ  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.16 ರಿಂದ  ಸೆ.21 ರ ವರೆಗೆ ನಡೆಯಲಿದೆ. ಸೆ.22 ರಂದು  ಭಜನೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಭಜನಾ ಸಮಿತಿಯ ಕಾರ್ಯದರ್ಶಿ ಮಮತಾರಾವ್ ತಿಳಿಸಿದ್ದಾರೆ.

Advertisement

ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಕಾಸರಗೋಡು, ಉತ್ತರಕನ್ನಡ, ಮೈಸೂರು, ಧಾರವಾಡ,ಗದಗ, ಹಾವೇರಿ, ಚಿತ್ರದುರ್ಗ, ಕೊಪ್ಪಳ, ದಾವಣಗೆರೆ, ಮಂಡ್ಯ, ಬೆಂಗಳೂರು ಗ್ರಾಮಾಂತರಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ 250 ಮಂದಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಅವಕಾಶವಿದೆ.

ಭಜನೆಗಳು, ಪ್ರಾರ್ಥನಾ ಗೀತೆಗಳು, ವಚನ ಸಾಹಿತ್ಯಗಳು, ಸಾ0ಪ್ರದಾಯಿಕ ಗೀತೆಗಳನ್ನು ಭಜನಾ ತರಬೇತುದಾರರಿ0ದ ತರಬೇತಿ ನೀಡಲಾಗುತ್ತದೆ.ಮಹಿಳಾ ಶಿಬಿರಾರ್ಥಿಗಳಿಗೆ ಶೋಭಾನೆ ಹಾಡುಗಳನ್ನು ಹೇಳಿಕೊಡಲಾಗುತ್ತದೆ. ನೃತ್ಯ ಭಜನಾ ಪರಿಣಿತರಿಂದ ನೃತ್ಯ ಭಜನೆ ಹೇಳಿಕೊಡಲಾಗುತ್ತದೆ. ಪ್ರತಿ ದಿನವೂ ಮುಸ್ಸಂಜೆ ವೇಳೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಗರ ಸಂಕೀರ್ತನೆಯನ್ನುಆಯೋಜಿಸಲಾಗುತ್ತದೆ. ಯೋಗಾಭ್ಯಾಸ, ಧ್ಯಾನಗಳ ತರಗತಿಗಳನ್ನು ವ್ಯವಸ್ಥೆಗೊಳಿಸಲಾಗುತ್ತದೆ. ವಿವಿಧ ವಿಷಯ ತಜ್ಞರಿಂದ ಒಂದು ಗಂಟೆಯ ಕಾಲ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. ಒಟ್ಟಾರೆಯಾಗಿ ವ್ಯಕ್ತಿತ್ವ ವಿಕಸನದೊ0ದಿಗೆ ಅಭ್ಯರ್ಥಿಗಳಿಗೆ ಭಜನಾ ಹಾಡುಗಾರಿಕೆಯಲ್ಲಿ ಪರಿಣಿತರನ್ನಾಗಿ ಮಾಡಲಾಗುತ್ತದೆ.

ಅರ್ಹತೆ:-

Advertisement

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ ಓದಲು, ಬರೆಯಲು ತಿಳಿದಿರಬೇಕು. 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.ಕನಿಷ್ಠ ರಾಗ, ತಾಳ, ಜ್ಞಾನ ಹೊಂದಿರಬೇಕು ಮತ್ತು ಯಾವುದಾದರೂ ಒಂದು ಭಜನಾ ಮಂಡಳಿಯ ಸದಸ್ಯರಾಗಿರಬೇಕು. ಒಂದು ಮಂಡಳಿಯಿಂದ 2 ಸದಸ್ಯರಿಗೆ ಭಾಗವಹಿಸಲು ಅವಕಾಶವಿದೆ. ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.ತರಬೇತಿ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.

Advertisement

 

ಹೆಚ್ಚಿನ ಮಾಹಿತಿಗಾಗಿ:

 ಮಮತಾರಾವ್ (9449776921)ಕಾರ್ಯದರ್ಶಿ

ಸುಬ್ರಹ್ಮಣ್ಯಪ್ರಸಾದ್(9448869340)ಸಂಯೋಜಕರು

ನಾಗೇಂದ್ರ ಅಡಿಗ  (9448445304) ಕೋಶಾಧಿಕಾರಿ

Advertisement

 ಇವರನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸೋಗಾಲ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ…

5 hours ago

ಉತ್ತರಕಾಶಿಯ ಮೇಘಸ್ಫೋಟದಿಂದ ಭಾರಿ ಪ್ರವಾಹ | ಶೋಧ, ರಕ್ಷಣಾ ಕಾರ್ಯ ಮುಂದುವರಿಕೆ

ಉತ್ತರಾಖಂಡದ ಉತ್ತರಕಾಶಿಯ ಮೇಘಸ್ಫೋಟದಿಂದ ದಿಡೀರ್ ಭಾರೀ ಪ್ರವಾಹಕ್ಕೆ ತುತ್ತಾದ  ದರಾಲಿ, ಮತ್ತು ಹರ್ಸಿಲ್…

6 hours ago

ಬೆಳಗಾವಿ : ಗೊಣ್ಣೆಹುಳು ಕಾಟದಿಂದ ಬೆಳೆ ಭೀತಿಯಲ್ಲಿ ರೈತರು | ಕೀಟ ಬಾಧೆಗೆ ತುತ್ತಾಗಿ ಅಪಾರ ನಷ್ಟ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದಲ್ಲಿ ಗೊಣ್ಣೆ ಹುಳ್ಳುಗಳ ಕಾಟ ಶುರುವಾಗಿದ್ದು, ರೈತರು…

6 hours ago

ಹವಾಮಾನ ವರದಿ | 08-08-2025 | ಸಾಮಾನ್ಯ ಮಳೆ ಸಾಧ್ಯತೆ | ಆ.15 ರಿಂದ ಎಲ್ಲೆಲ್ಲಾ ಮತ್ತೆ ಮಳೆಯಾಗಬಹುದು..?

ಈಗಿನಂತೆ ಆಗಸ್ಟ್ 10 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಆಗಸ್ಟ್ 16ರಿಂದ ಕರಾವಳಿಗೆ…

14 hours ago

ಅಡಿಕೆ ವಹಿವಾಟಿನಲ್ಲಿ ವಂಚನೆ | ಮುಂಬೈ ಉದ್ಯಮಿಗೆ 30 ಲಕ್ಷ ಪಂಗನಾಮ

ಅಡಿಕೆ ವಹಿವಾಟಿನಲ್ಲಿ ಈಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅಡಿಕೆ ಬೆಳೆಯುವ ಪ್ರದೇಶದಲ್ಲಿ ಮಾತ್ರವಲ್ಲ…

20 hours ago

ರಾಜ್ಯದ ಐವರು ನೇಕಾರರಿಗೆ ಪ್ರಶಸ್ತಿ ಪ್ರದಾನ – ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ

ಬೆಂಗಳೂರಿನಲ್ಲಿ ನಡೆದ   11ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ  ಕಾರ್ಯಕ್ರಮದಲ್ಲಿ  ಐವರು  ನೇಕಾರರಿಗೆ  ರಾಜ್ಯ…

21 hours ago