Advertisement
ಧಾರ್ಮಿಕ

ಸೆ.16 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

Share

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾಪರಿಷತ್‍  ವತಿಯಿಂದ  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.16 ರಿಂದ  ಸೆ.21 ರ ವರೆಗೆ ನಡೆಯಲಿದೆ. ಸೆ.22 ರಂದು  ಭಜನೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಭಜನಾ ಸಮಿತಿಯ ಕಾರ್ಯದರ್ಶಿ ಮಮತಾರಾವ್ ತಿಳಿಸಿದ್ದಾರೆ.

Advertisement
Advertisement
Advertisement
Advertisement

ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಕಾಸರಗೋಡು, ಉತ್ತರಕನ್ನಡ, ಮೈಸೂರು, ಧಾರವಾಡ,ಗದಗ, ಹಾವೇರಿ, ಚಿತ್ರದುರ್ಗ, ಕೊಪ್ಪಳ, ದಾವಣಗೆರೆ, ಮಂಡ್ಯ, ಬೆಂಗಳೂರು ಗ್ರಾಮಾಂತರಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ 250 ಮಂದಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಅವಕಾಶವಿದೆ.

Advertisement

ಭಜನೆಗಳು, ಪ್ರಾರ್ಥನಾ ಗೀತೆಗಳು, ವಚನ ಸಾಹಿತ್ಯಗಳು, ಸಾ0ಪ್ರದಾಯಿಕ ಗೀತೆಗಳನ್ನು ಭಜನಾ ತರಬೇತುದಾರರಿ0ದ ತರಬೇತಿ ನೀಡಲಾಗುತ್ತದೆ.ಮಹಿಳಾ ಶಿಬಿರಾರ್ಥಿಗಳಿಗೆ ಶೋಭಾನೆ ಹಾಡುಗಳನ್ನು ಹೇಳಿಕೊಡಲಾಗುತ್ತದೆ. ನೃತ್ಯ ಭಜನಾ ಪರಿಣಿತರಿಂದ ನೃತ್ಯ ಭಜನೆ ಹೇಳಿಕೊಡಲಾಗುತ್ತದೆ. ಪ್ರತಿ ದಿನವೂ ಮುಸ್ಸಂಜೆ ವೇಳೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಗರ ಸಂಕೀರ್ತನೆಯನ್ನುಆಯೋಜಿಸಲಾಗುತ್ತದೆ. ಯೋಗಾಭ್ಯಾಸ, ಧ್ಯಾನಗಳ ತರಗತಿಗಳನ್ನು ವ್ಯವಸ್ಥೆಗೊಳಿಸಲಾಗುತ್ತದೆ. ವಿವಿಧ ವಿಷಯ ತಜ್ಞರಿಂದ ಒಂದು ಗಂಟೆಯ ಕಾಲ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. ಒಟ್ಟಾರೆಯಾಗಿ ವ್ಯಕ್ತಿತ್ವ ವಿಕಸನದೊ0ದಿಗೆ ಅಭ್ಯರ್ಥಿಗಳಿಗೆ ಭಜನಾ ಹಾಡುಗಾರಿಕೆಯಲ್ಲಿ ಪರಿಣಿತರನ್ನಾಗಿ ಮಾಡಲಾಗುತ್ತದೆ.

ಅರ್ಹತೆ:-

Advertisement

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ ಓದಲು, ಬರೆಯಲು ತಿಳಿದಿರಬೇಕು. 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.ಕನಿಷ್ಠ ರಾಗ, ತಾಳ, ಜ್ಞಾನ ಹೊಂದಿರಬೇಕು ಮತ್ತು ಯಾವುದಾದರೂ ಒಂದು ಭಜನಾ ಮಂಡಳಿಯ ಸದಸ್ಯರಾಗಿರಬೇಕು. ಒಂದು ಮಂಡಳಿಯಿಂದ 2 ಸದಸ್ಯರಿಗೆ ಭಾಗವಹಿಸಲು ಅವಕಾಶವಿದೆ. ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.ತರಬೇತಿ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.

 

Advertisement

ಹೆಚ್ಚಿನ ಮಾಹಿತಿಗಾಗಿ:

 ಮಮತಾರಾವ್ (9449776921)ಕಾರ್ಯದರ್ಶಿ

Advertisement

ಸುಬ್ರಹ್ಮಣ್ಯಪ್ರಸಾದ್(9448869340)ಸಂಯೋಜಕರು

ನಾಗೇಂದ್ರ ಅಡಿಗ  (9448445304) ಕೋಶಾಧಿಕಾರಿ

Advertisement

 ಇವರನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

3 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

3 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

11 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

14 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago