Advertisement
ಧಾರ್ಮಿಕ

ಸೆ.16 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

Share

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾಪರಿಷತ್‍  ವತಿಯಿಂದ  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.16 ರಿಂದ  ಸೆ.21 ರ ವರೆಗೆ ನಡೆಯಲಿದೆ. ಸೆ.22 ರಂದು  ಭಜನೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಭಜನಾ ಸಮಿತಿಯ ಕಾರ್ಯದರ್ಶಿ ಮಮತಾರಾವ್ ತಿಳಿಸಿದ್ದಾರೆ.

ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಕಾಸರಗೋಡು, ಉತ್ತರಕನ್ನಡ, ಮೈಸೂರು, ಧಾರವಾಡ,ಗದಗ, ಹಾವೇರಿ, ಚಿತ್ರದುರ್ಗ, ಕೊಪ್ಪಳ, ದಾವಣಗೆರೆ, ಮಂಡ್ಯ, ಬೆಂಗಳೂರು ಗ್ರಾಮಾಂತರಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ 250 ಮಂದಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಅವಕಾಶವಿದೆ.

ಭಜನೆಗಳು, ಪ್ರಾರ್ಥನಾ ಗೀತೆಗಳು, ವಚನ ಸಾಹಿತ್ಯಗಳು, ಸಾ0ಪ್ರದಾಯಿಕ ಗೀತೆಗಳನ್ನು ಭಜನಾ ತರಬೇತುದಾರರಿ0ದ ತರಬೇತಿ ನೀಡಲಾಗುತ್ತದೆ.ಮಹಿಳಾ ಶಿಬಿರಾರ್ಥಿಗಳಿಗೆ ಶೋಭಾನೆ ಹಾಡುಗಳನ್ನು ಹೇಳಿಕೊಡಲಾಗುತ್ತದೆ. ನೃತ್ಯ ಭಜನಾ ಪರಿಣಿತರಿಂದ ನೃತ್ಯ ಭಜನೆ ಹೇಳಿಕೊಡಲಾಗುತ್ತದೆ. ಪ್ರತಿ ದಿನವೂ ಮುಸ್ಸಂಜೆ ವೇಳೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಗರ ಸಂಕೀರ್ತನೆಯನ್ನುಆಯೋಜಿಸಲಾಗುತ್ತದೆ. ಯೋಗಾಭ್ಯಾಸ, ಧ್ಯಾನಗಳ ತರಗತಿಗಳನ್ನು ವ್ಯವಸ್ಥೆಗೊಳಿಸಲಾಗುತ್ತದೆ. ವಿವಿಧ ವಿಷಯ ತಜ್ಞರಿಂದ ಒಂದು ಗಂಟೆಯ ಕಾಲ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. ಒಟ್ಟಾರೆಯಾಗಿ ವ್ಯಕ್ತಿತ್ವ ವಿಕಸನದೊ0ದಿಗೆ ಅಭ್ಯರ್ಥಿಗಳಿಗೆ ಭಜನಾ ಹಾಡುಗಾರಿಕೆಯಲ್ಲಿ ಪರಿಣಿತರನ್ನಾಗಿ ಮಾಡಲಾಗುತ್ತದೆ.

ಅರ್ಹತೆ:-

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ ಓದಲು, ಬರೆಯಲು ತಿಳಿದಿರಬೇಕು. 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.ಕನಿಷ್ಠ ರಾಗ, ತಾಳ, ಜ್ಞಾನ ಹೊಂದಿರಬೇಕು ಮತ್ತು ಯಾವುದಾದರೂ ಒಂದು ಭಜನಾ ಮಂಡಳಿಯ ಸದಸ್ಯರಾಗಿರಬೇಕು. ಒಂದು ಮಂಡಳಿಯಿಂದ 2 ಸದಸ್ಯರಿಗೆ ಭಾಗವಹಿಸಲು ಅವಕಾಶವಿದೆ. ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.ತರಬೇತಿ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.

 

ಹೆಚ್ಚಿನ ಮಾಹಿತಿಗಾಗಿ:

 ಮಮತಾರಾವ್ (9449776921)ಕಾರ್ಯದರ್ಶಿ

ಸುಬ್ರಹ್ಮಣ್ಯಪ್ರಸಾದ್(9448869340)ಸಂಯೋಜಕರು

ನಾಗೇಂದ್ರ ಅಡಿಗ  (9448445304) ಕೋಶಾಧಿಕಾರಿ

 ಇವರನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

10 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago