Advertisement
ಧಾರ್ಮಿಕ

ಸೆ.16 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

Share

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾಪರಿಷತ್‍  ವತಿಯಿಂದ  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.16 ರಿಂದ  ಸೆ.21 ರ ವರೆಗೆ ನಡೆಯಲಿದೆ. ಸೆ.22 ರಂದು  ಭಜನೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಭಜನಾ ಸಮಿತಿಯ ಕಾರ್ಯದರ್ಶಿ ಮಮತಾರಾವ್ ತಿಳಿಸಿದ್ದಾರೆ.

ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಕಾಸರಗೋಡು, ಉತ್ತರಕನ್ನಡ, ಮೈಸೂರು, ಧಾರವಾಡ,ಗದಗ, ಹಾವೇರಿ, ಚಿತ್ರದುರ್ಗ, ಕೊಪ್ಪಳ, ದಾವಣಗೆರೆ, ಮಂಡ್ಯ, ಬೆಂಗಳೂರು ಗ್ರಾಮಾಂತರಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ 250 ಮಂದಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಅವಕಾಶವಿದೆ.

ಭಜನೆಗಳು, ಪ್ರಾರ್ಥನಾ ಗೀತೆಗಳು, ವಚನ ಸಾಹಿತ್ಯಗಳು, ಸಾ0ಪ್ರದಾಯಿಕ ಗೀತೆಗಳನ್ನು ಭಜನಾ ತರಬೇತುದಾರರಿ0ದ ತರಬೇತಿ ನೀಡಲಾಗುತ್ತದೆ.ಮಹಿಳಾ ಶಿಬಿರಾರ್ಥಿಗಳಿಗೆ ಶೋಭಾನೆ ಹಾಡುಗಳನ್ನು ಹೇಳಿಕೊಡಲಾಗುತ್ತದೆ. ನೃತ್ಯ ಭಜನಾ ಪರಿಣಿತರಿಂದ ನೃತ್ಯ ಭಜನೆ ಹೇಳಿಕೊಡಲಾಗುತ್ತದೆ. ಪ್ರತಿ ದಿನವೂ ಮುಸ್ಸಂಜೆ ವೇಳೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಗರ ಸಂಕೀರ್ತನೆಯನ್ನುಆಯೋಜಿಸಲಾಗುತ್ತದೆ. ಯೋಗಾಭ್ಯಾಸ, ಧ್ಯಾನಗಳ ತರಗತಿಗಳನ್ನು ವ್ಯವಸ್ಥೆಗೊಳಿಸಲಾಗುತ್ತದೆ. ವಿವಿಧ ವಿಷಯ ತಜ್ಞರಿಂದ ಒಂದು ಗಂಟೆಯ ಕಾಲ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. ಒಟ್ಟಾರೆಯಾಗಿ ವ್ಯಕ್ತಿತ್ವ ವಿಕಸನದೊ0ದಿಗೆ ಅಭ್ಯರ್ಥಿಗಳಿಗೆ ಭಜನಾ ಹಾಡುಗಾರಿಕೆಯಲ್ಲಿ ಪರಿಣಿತರನ್ನಾಗಿ ಮಾಡಲಾಗುತ್ತದೆ.

ಅರ್ಹತೆ:-

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ ಓದಲು, ಬರೆಯಲು ತಿಳಿದಿರಬೇಕು. 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.ಕನಿಷ್ಠ ರಾಗ, ತಾಳ, ಜ್ಞಾನ ಹೊಂದಿರಬೇಕು ಮತ್ತು ಯಾವುದಾದರೂ ಒಂದು ಭಜನಾ ಮಂಡಳಿಯ ಸದಸ್ಯರಾಗಿರಬೇಕು. ಒಂದು ಮಂಡಳಿಯಿಂದ 2 ಸದಸ್ಯರಿಗೆ ಭಾಗವಹಿಸಲು ಅವಕಾಶವಿದೆ. ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.ತರಬೇತಿ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.

 

ಹೆಚ್ಚಿನ ಮಾಹಿತಿಗಾಗಿ:

 ಮಮತಾರಾವ್ (9449776921)ಕಾರ್ಯದರ್ಶಿ

ಸುಬ್ರಹ್ಮಣ್ಯಪ್ರಸಾದ್(9448869340)ಸಂಯೋಜಕರು

ನಾಗೇಂದ್ರ ಅಡಿಗ  (9448445304) ಕೋಶಾಧಿಕಾರಿ

 ಇವರನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

20 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago