ಸುಳ್ಯ:ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ಆರ್ಥಿಕ ನೆರವಿನಿಂದ ಮತ್ತು ವಿವಿಧ ಯುವ ಸಂಘಟನೆಗಳ ಶ್ರಮದಾನದಿಂದ ಅಜ್ಜಾವರದಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆಯ ಹಾಸ್ತಾಂತರ ಕಾರ್ಯಕ್ರಮ ಸೆ.21 ರಂದು ನಡೆಯಲಿದೆ.
ಮನೆ ಇಲ್ಲದ ನಿರ್ಗತಿಕ ಕುಟುಂಬಗಳಿಗೆ ಮನೆ ನಿರ್ಮಿಸುವ ‘ಬೆಳಕು’ ಯೋಜನೆಯಡಿ ಅಜ್ಜಾವರದಲ್ಲಿ ನಿರ್ಮಿಸಿದ ಎರಡನೇ ಮನೆ ಇದಾಗಿದೆ. ಒಂದೂವರೆ ತಿಂಗಳಲ್ಲಿ ದಾನಿಗಳ ನೆರವಿನಿಂದ ಅಜ್ಜಾವರದಲ್ಲಿ ಎರಡು ಮನೆಯ ನಿರ್ಮಾಣ ಮಾಡಲಾಗಿದೆ. 18 ದಿನದಲ್ಲಿ ಸುಮಾರು ಎರಡು ಲಕ್ಷ ರೂ ವೆಚ್ಚದಲ್ಲಿ ಎರಡನೇ ಮನೆಯ ನಿರ್ಮಾಣ ಪೂರ್ತಿಯಾಗಿದೆ.
ಸೆ.21 ರಂದು ಪೂ.10.30 ಕ್ಕೆ ನಡೆಯುವ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಿದ್ದಾರೆ. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ನದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…