ಬಾಳಿಲ: ಭಾರತೀಯ ಕಿಸಾನ್ ಸಂಘದ ವತಿಯಿಂದ ಸೆ.22 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ರಿಂದ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸುವರು. ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಭಾಗವಹಿಸುವರು.
ಸಭಾಕಾರ್ಯಕ್ರಮದ ಬಳಿಕ ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಪೂರ್ಣಗೊಳಿಸುವ ಬಗ್ಗೆ ಹೋರಾಟ ಹಾಗೂ ಪರಿಣಾಮಗಳ ವಿಚಾರಗೋಷ್ಠಿ ನಡೆಯಲಿದೆ. ರಮೇಶ್ ಕೋಟೆ ಹಾಗೂ ಜಯಪ್ರಸಾದ್ ಜೋಶಿ ವಿಚಾರ ಮಂಡಿಸಲಿದ್ದಾರೆ. ಇದೇ ಸಂದರ್ಭ ಸದಾಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಸಂದರ್ಭ ಶ್ರೀ ಎಂಟರ್ ಪ್ರೈಸಸ್ ಇವರಿಂದ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…