ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಸೆ.22 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ರಿಂದ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸುವರು. ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಭಾಗವಹಿಸುವರು.
ಸಭಾಕಾರ್ಯಕ್ರಮದ ಬಳಿಕ ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಪೂರ್ಣಗೊಳಿಸುವ ಬಗ್ಗೆ ಹೋರಾಟ ಹಾಗೂ ಪರಿಣಾಮಗಳ ವಿಚಾರಗೋಷ್ಠಿ ನಡೆಯಲಿದೆ. ರಮೇಶ್ ಕೋಟೆ ಹಾಗೂ ಜಯಪ್ರಸಾದ್ ಜೋಶಿ ವಿಚಾರ ಮಂಡಿಸಲಿದ್ದಾರೆ. ಇದೇ ಸಂದರ್ಭ ಸದಾಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಸಂದರ್ಭ ಶ್ರೀ ಎಂಟರ್ ಪ್ರೈಸಸ್ ಇವರಿಂದ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…