ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಸೆ.22 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ರಿಂದ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸುವರು. ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಭಾಗವಹಿಸುವರು.
ಸಭಾಕಾರ್ಯಕ್ರಮದ ಬಳಿಕ ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಪೂರ್ಣಗೊಳಿಸುವ ಬಗ್ಗೆ ಹೋರಾಟ ಹಾಗೂ ಪರಿಣಾಮಗಳ ವಿಚಾರಗೋಷ್ಠಿ ನಡೆಯಲಿದೆ. ರಮೇಶ್ ಕೋಟೆ ಹಾಗೂ ಜಯಪ್ರಸಾದ್ ಜೋಶಿ ವಿಚಾರ ಮಂಡಿಸಲಿದ್ದಾರೆ. ಇದೇ ಸಂದರ್ಭ ಸದಾಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಸಂದರ್ಭ ಶ್ರೀ ಎಂಟರ್ ಪ್ರೈಸಸ್ ಇವರಿಂದ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…