Advertisement
ಸುದ್ದಿಗಳು

ಸೆ.30 : ಕೋಟೇಶ್ವರದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಡಲಿದೆ ಬ್ರಹ್ಮರಥ

Share

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ.

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ,  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥದ ಕಾರ್ಯ ಪರಿಪೂರ್ಣಗೊಂಡಿದ್ದು ಕೋಟೇಶ್ವರದಿಂದ ರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ ಎಂದು ತಿಳಿಸಿದರು. 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನು ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಕೈಚಳಕದಲ್ಲಿ ವೈಶಿಷ್ಟ್ಯಪೂರ್ಣವಾಗಿ ಮೂಡಿಬಂದಿದೆ ಎಂದು ವಿವರಿಸಿದರು.

ನೂತನ ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ ಅ.2ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ್ದು ಅಲ್ಲಿ ದೇವಳದ ಆಡಳಿತವು ಭವ್ಯ ಮೆರವಣಿಗೆಯಲ್ಲಿ ರಥವನ್ನು ಬರಮಾಡಿಕೊಂಡು ದೇವಳಕ್ಕೆ ಸಮರ್ಪಣೆಗೊಳ್ಳಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ , ಗೌರವ ಸಲಹೆಗಾರ ಸುಧಾಕರ ರಾವ್‌ , ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್ ಉಡುಪಿ , ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಕುಂದಾಪುರ, ಮುಂತಾದವರು  ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

7 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago