ಸುದ್ದಿಗಳು

ಸೆ.30 : ಕೋಟೇಶ್ವರದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಡಲಿದೆ ಬ್ರಹ್ಮರಥ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ.

Advertisement
Advertisement

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ,  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥದ ಕಾರ್ಯ ಪರಿಪೂರ್ಣಗೊಂಡಿದ್ದು ಕೋಟೇಶ್ವರದಿಂದ ರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ ಎಂದು ತಿಳಿಸಿದರು. 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನು ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಕೈಚಳಕದಲ್ಲಿ ವೈಶಿಷ್ಟ್ಯಪೂರ್ಣವಾಗಿ ಮೂಡಿಬಂದಿದೆ ಎಂದು ವಿವರಿಸಿದರು.

ನೂತನ ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ ಅ.2ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ್ದು ಅಲ್ಲಿ ದೇವಳದ ಆಡಳಿತವು ಭವ್ಯ ಮೆರವಣಿಗೆಯಲ್ಲಿ ರಥವನ್ನು ಬರಮಾಡಿಕೊಂಡು ದೇವಳಕ್ಕೆ ಸಮರ್ಪಣೆಗೊಳ್ಳಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ , ಗೌರವ ಸಲಹೆಗಾರ ಸುಧಾಕರ ರಾವ್‌ , ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್ ಉಡುಪಿ , ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಕುಂದಾಪುರ, ಮುಂತಾದವರು  ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

13 minutes ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

54 minutes ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

9 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

9 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

10 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

10 hours ago