ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ.
ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥದ ಕಾರ್ಯ ಪರಿಪೂರ್ಣಗೊಂಡಿದ್ದು ಕೋಟೇಶ್ವರದಿಂದ ರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ ಎಂದು ತಿಳಿಸಿದರು. 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನು ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಕೈಚಳಕದಲ್ಲಿ ವೈಶಿಷ್ಟ್ಯಪೂರ್ಣವಾಗಿ ಮೂಡಿಬಂದಿದೆ ಎಂದು ವಿವರಿಸಿದರು.
ನೂತನ ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ ಅ.2ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ್ದು ಅಲ್ಲಿ ದೇವಳದ ಆಡಳಿತವು ಭವ್ಯ ಮೆರವಣಿಗೆಯಲ್ಲಿ ರಥವನ್ನು ಬರಮಾಡಿಕೊಂಡು ದೇವಳಕ್ಕೆ ಸಮರ್ಪಣೆಗೊಳ್ಳಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ , ಗೌರವ ಸಲಹೆಗಾರ ಸುಧಾಕರ ರಾವ್ , ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್ ಉಡುಪಿ , ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಕುಂದಾಪುರ, ಮುಂತಾದವರು ಇದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…