Advertisement
ಸುದ್ದಿಗಳು

ಸೆ.30 : ಕೋಟೇಶ್ವರದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಡಲಿದೆ ಬ್ರಹ್ಮರಥ

Share

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ.

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ,  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥದ ಕಾರ್ಯ ಪರಿಪೂರ್ಣಗೊಂಡಿದ್ದು ಕೋಟೇಶ್ವರದಿಂದ ರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ ಎಂದು ತಿಳಿಸಿದರು. 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನು ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಕೈಚಳಕದಲ್ಲಿ ವೈಶಿಷ್ಟ್ಯಪೂರ್ಣವಾಗಿ ಮೂಡಿಬಂದಿದೆ ಎಂದು ವಿವರಿಸಿದರು.

ನೂತನ ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ ಅ.2ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ್ದು ಅಲ್ಲಿ ದೇವಳದ ಆಡಳಿತವು ಭವ್ಯ ಮೆರವಣಿಗೆಯಲ್ಲಿ ರಥವನ್ನು ಬರಮಾಡಿಕೊಂಡು ದೇವಳಕ್ಕೆ ಸಮರ್ಪಣೆಗೊಳ್ಳಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ , ಗೌರವ ಸಲಹೆಗಾರ ಸುಧಾಕರ ರಾವ್‌ , ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್ ಉಡುಪಿ , ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಕುಂದಾಪುರ, ಮುಂತಾದವರು  ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

12 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

19 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago