Advertisement
ಸುದ್ದಿಗಳು

ಸೆ.30 : ಕೋಟೇಶ್ವರದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಡಲಿದೆ ಬ್ರಹ್ಮರಥ

Share

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ.

Advertisement
Advertisement

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ,  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥದ ಕಾರ್ಯ ಪರಿಪೂರ್ಣಗೊಂಡಿದ್ದು ಕೋಟೇಶ್ವರದಿಂದ ರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ ಎಂದು ತಿಳಿಸಿದರು. 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನು ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಕೈಚಳಕದಲ್ಲಿ ವೈಶಿಷ್ಟ್ಯಪೂರ್ಣವಾಗಿ ಮೂಡಿಬಂದಿದೆ ಎಂದು ವಿವರಿಸಿದರು.

Advertisement

ನೂತನ ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ ಅ.2ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ್ದು ಅಲ್ಲಿ ದೇವಳದ ಆಡಳಿತವು ಭವ್ಯ ಮೆರವಣಿಗೆಯಲ್ಲಿ ರಥವನ್ನು ಬರಮಾಡಿಕೊಂಡು ದೇವಳಕ್ಕೆ ಸಮರ್ಪಣೆಗೊಳ್ಳಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ , ಗೌರವ ಸಲಹೆಗಾರ ಸುಧಾಕರ ರಾವ್‌ , ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್ ಉಡುಪಿ , ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಕುಂದಾಪುರ, ಮುಂತಾದವರು  ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

3 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

3 hours ago

Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…

5 hours ago

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

7 hours ago