ಸುದ್ದಿಗಳು

ಸೆ.30 ರಂದು ಸಮಾಜ ಘಾತಕ ಶಕ್ತಿಗಳ ವಿರುದ್ಧ ಕೊಯನಾಡಿನಲ್ಲಿ ಜನಜಾಗೃತಿ ಸಭೆ ಮತ್ತು ಜಾಗೃತಿ ಜಾಥಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಜನಜಾಗೃತಿ ಸಮಿತಿ ಸಂಪಾಜೆ ವಲಯದ ವತಿಯಿಂದ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಜನಜಾಗೃತಿ ಸಭೆ ಸೆ.30ರಂದು ಸಂಜೆ.4 ಗಂಟೆಗೆ ಕೊಯನಾಡು ಶ್ರೀ ಗಣೇಶ ಕಲಾಮಂದಿರದ ವಠಾರದಲ್ಲಿ ನಡೆಯಲಿದೆ ಎಂದು ಬಿಜೆಪಿ ಸುಳ್ಯ ನಗರ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಅಪರಾಹ್ನ 2ರಿಂದ ಸಂಪಾಜೆ ಗೇಟಿನಿಂದ ಕೊಯನಾಡು ಗಣೇಶ ಕಲಾಮಂದಿರದವರೆಗೆ ಜಾಗೃತಿ ಜಾಥಾ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿ ಪ್ರಮುಖರು ಸಭೆಯಲ್ಲಿ ಭಾಷಣ ಮಾಡಲಿದ್ದಾರೆ‌. ಸುಳ್ಯ ಬಿಜೆಪಿ ಮಂಡಲ ಸಮಿತಿ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಜಾಗೃತಿ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ. ಕೊಡಗು ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಅವರ ಹತ್ಯೆಯನ್ನು ಖಂಡಿಸಿ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ.

Advertisement

ಎರಡು ಬಾರಿ ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷರಾಗಿ, ಗ್ರಾಮಕ್ಕೆ ರಾಷ್ಟ್ರಪ್ರಶಸ್ತಿ ಬರುವಂತೆ ಮಾಡಿ ಗ್ರಾಮವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದವರು ಬಾಲಚಂದ್ರ ಕಳಗಿಯವರು. ಆದರೆ ಕ್ರಿಮಿನಲ್ ಮಾನಸಿಕತೆಯ ವ್ಯಕ್ತಿಗಳು ಕಾರಿಗೆ ಲಾರಿ ಡಿಕ್ಕಿ ಹೊಡೆಸಿ ಅವರನ್ನು ಕೊಲೆ ಮಾಡಿದ್ದಾರೆ. ಗ್ರಾಮಕ್ಕೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗ್ರಾಮವನ್ನು ಅಭಿವೃದ್ಧಿಪಡಿಸಿರುವುದರ ಜೊತೆಗೆ ಗ್ರಾಮವನ್ನು ಮದ್ಯಮುಕ್ತವಾಗಿಸಿ ಯಾವುದೇ ಕ್ರಿಮಿನಲ್ ಚಟುವಟಿಕೆಗಳು ನಡೆಯದಂತೆ ನೋಡಿಕೊಂಡರು. ಆದರೆ ಕ್ರಿಮಿನಲ್ ಗ್ಯಾಂಗ್ ನ ಪಿತೂರಿಗೆ ಅವರು ಬಲಿಯಾಗಿದ್ದಾರೆ. ಇದು ಇಡೀ ಗ್ರಾಮಕ್ಕೆ ದೊಡ್ಡ ನೋವು ತಂದಿದೆ. ಇಂತಹಾ ಕ್ರಿಮಿನಲ್ ಗ್ಯಾಂಗ್ ಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು ಮತ್ತು ಇಂತಹಾ ಸಮಾಜ ಘಾತುಕ ಶಕ್ತಿಗಳು ತಲೆ ಎತ್ತದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜನಜಾಗೃತಿ ಸಭೆ ಮತ್ತು ಜಾಥಾ ಏರ್ಪಡಿಸಲಾಗಿದೆ.

ಈ ಮಾಫಿಯಾಗಳ ಅಕ್ರಮ ಚಟುವಟಿಕೆಗಳ ತನಿಖೆಯಾಗಬೇಕು ಮತ್ತು ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗುವುದು. ಸುಳ್ಯ ಮತ್ತು ಕೊಡಗಿನ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜಾರಾಮ ಕಳಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದ.ಕ‌.ಜಿಲ್ಲಾ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ಭಜರಂಗದಳ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ಸಂತೋಷ್ ಮಡ್ತಿಲ, ಬಾಲಕೃಷ್ಣ ನೆಡ್ಚಿಲು, ಶಬರೀಶ ಕುದ್ಕುಳಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ನಿರ್ಮಿಸಲಾದ ವಿದ್ಯುತ್ ಗ್ರಿಡ್ ಉದ್ಘಾಟನೆ

ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್…

4 hours ago

ಮೈಸೂರು ಮೃಗಾಲಯದ ಪ್ರವೇಶ ದರ ಹೆಚ್ಚಳ | ಶೇಕಡ 20 ರಷ್ಟು ಹೆಚ್ಚಳ

ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ…

4 hours ago

ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು

ಕೇಂದ್ರ  ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ,…

5 hours ago

NCDCಗೆ 2 ಸಾವಿರ ಕೋ.ರೂ. ಅನುದಾನ | ಮಹಿಳೆಯರಿಗೆ, ಯವಕರಿಗೆ ಉದ್ಯೋಗಾವಕಾಶ

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ…

5 hours ago

ರಾಜ್ಯದ 5 ಜಿಲ್ಲೆಗಳಲ್ಲಿ ಖಾದಿ ಚಟುವಟಿಕೆ ಉತ್ತೇಜಿಸಲು ಖಾದಿ ಮಂಡಳಿ ಸ್ಥಾಪನೆಗೆ ನಿರ್ಧಾರ

ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು…

5 hours ago

ಹವಾಮಾನ ಆಧಾರಿತ ಬೆಳೆ ವಿಮೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೈತರ ನೋಂದಣಿಗೆ ಆಗಸ್ಟ್ 11 ಅಂತಿಮ ದಿನ

2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

5 hours ago