Advertisement
ಸುದ್ದಿಗಳು

ಸೆ.30 ರಂದು ಸಮಾಜ ಘಾತಕ ಶಕ್ತಿಗಳ ವಿರುದ್ಧ ಕೊಯನಾಡಿನಲ್ಲಿ ಜನಜಾಗೃತಿ ಸಭೆ ಮತ್ತು ಜಾಗೃತಿ ಜಾಥಾ

Share

ಸುಳ್ಯ: ಜನಜಾಗೃತಿ ಸಮಿತಿ ಸಂಪಾಜೆ ವಲಯದ ವತಿಯಿಂದ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಜನಜಾಗೃತಿ ಸಭೆ ಸೆ.30ರಂದು ಸಂಜೆ.4 ಗಂಟೆಗೆ ಕೊಯನಾಡು ಶ್ರೀ ಗಣೇಶ ಕಲಾಮಂದಿರದ ವಠಾರದಲ್ಲಿ ನಡೆಯಲಿದೆ ಎಂದು ಬಿಜೆಪಿ ಸುಳ್ಯ ನಗರ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಅಪರಾಹ್ನ 2ರಿಂದ ಸಂಪಾಜೆ ಗೇಟಿನಿಂದ ಕೊಯನಾಡು ಗಣೇಶ ಕಲಾಮಂದಿರದವರೆಗೆ ಜಾಗೃತಿ ಜಾಥಾ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿ ಪ್ರಮುಖರು ಸಭೆಯಲ್ಲಿ ಭಾಷಣ ಮಾಡಲಿದ್ದಾರೆ‌. ಸುಳ್ಯ ಬಿಜೆಪಿ ಮಂಡಲ ಸಮಿತಿ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಜಾಗೃತಿ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ. ಕೊಡಗು ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಅವರ ಹತ್ಯೆಯನ್ನು ಖಂಡಿಸಿ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ.

ಎರಡು ಬಾರಿ ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷರಾಗಿ, ಗ್ರಾಮಕ್ಕೆ ರಾಷ್ಟ್ರಪ್ರಶಸ್ತಿ ಬರುವಂತೆ ಮಾಡಿ ಗ್ರಾಮವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದವರು ಬಾಲಚಂದ್ರ ಕಳಗಿಯವರು. ಆದರೆ ಕ್ರಿಮಿನಲ್ ಮಾನಸಿಕತೆಯ ವ್ಯಕ್ತಿಗಳು ಕಾರಿಗೆ ಲಾರಿ ಡಿಕ್ಕಿ ಹೊಡೆಸಿ ಅವರನ್ನು ಕೊಲೆ ಮಾಡಿದ್ದಾರೆ. ಗ್ರಾಮಕ್ಕೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗ್ರಾಮವನ್ನು ಅಭಿವೃದ್ಧಿಪಡಿಸಿರುವುದರ ಜೊತೆಗೆ ಗ್ರಾಮವನ್ನು ಮದ್ಯಮುಕ್ತವಾಗಿಸಿ ಯಾವುದೇ ಕ್ರಿಮಿನಲ್ ಚಟುವಟಿಕೆಗಳು ನಡೆಯದಂತೆ ನೋಡಿಕೊಂಡರು. ಆದರೆ ಕ್ರಿಮಿನಲ್ ಗ್ಯಾಂಗ್ ನ ಪಿತೂರಿಗೆ ಅವರು ಬಲಿಯಾಗಿದ್ದಾರೆ. ಇದು ಇಡೀ ಗ್ರಾಮಕ್ಕೆ ದೊಡ್ಡ ನೋವು ತಂದಿದೆ. ಇಂತಹಾ ಕ್ರಿಮಿನಲ್ ಗ್ಯಾಂಗ್ ಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು ಮತ್ತು ಇಂತಹಾ ಸಮಾಜ ಘಾತುಕ ಶಕ್ತಿಗಳು ತಲೆ ಎತ್ತದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜನಜಾಗೃತಿ ಸಭೆ ಮತ್ತು ಜಾಥಾ ಏರ್ಪಡಿಸಲಾಗಿದೆ.

ಈ ಮಾಫಿಯಾಗಳ ಅಕ್ರಮ ಚಟುವಟಿಕೆಗಳ ತನಿಖೆಯಾಗಬೇಕು ಮತ್ತು ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗುವುದು. ಸುಳ್ಯ ಮತ್ತು ಕೊಡಗಿನ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜಾರಾಮ ಕಳಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದ.ಕ‌.ಜಿಲ್ಲಾ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ಭಜರಂಗದಳ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ಸಂತೋಷ್ ಮಡ್ತಿಲ, ಬಾಲಕೃಷ್ಣ ನೆಡ್ಚಿಲು, ಶಬರೀಶ ಕುದ್ಕುಳಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago