Advertisement
ಸುದ್ದಿಗಳು

ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನು ನಿರ್ವಹಿಸುವವರು ದಾದಿಯರು

Share

ಸುಳ್ಯ: ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ  ಬಿ ಎಂ ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳ ಕುರಿತು ಅಗತ್ಯ ಮಾಹಿತಿಯನ್ನೂ ನೀಡುವ ಮೂಲಕ ನರ್ಸಿಂಗ್ ಕ್ಷೇತ್ರದ ಅಗಾಧತೆಯ ಬಗ್ಗೆ ಬೆಳಕು ಚೆಲ್ಲಿದರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ, ಶಿಕ್ಷಕಿಯಾಗಿ, ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ಪ್ರಪಂಚದಲ್ಲಿ ನರ್ಸಿಂಗ್ ಶಿಕ್ಷಣ ಇಂದು ಬಹಳ ಬೇಡಿಕೆಯ ವಿಷಯವಾಗಿದೆ ಮತ್ತು ಸೇವೆ ನೀಡುವ ನಿಟ್ಟಿನಲ್ಲಿ ಈ ಕ್ಷೇತ್ರ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಮಾತನಾಡಿ ಸಂಪಾದನೆಗೆ ಮಾತ್ರ ಸೀಮಿತವಿರುವ ಉದ್ಯೋಗಾವಕಾಶಗಳು ಬಹಳಷ್ಟಿವೆ. ಆದರೆ ಮನುಷ್ಯನಿಗೆ ಸೇವಾ ಮನೋಭಾವದಿಂದ ಉದ್ಯೋಗವನ್ನು ನಿರ್ವಹಿಸುವಲ್ಲಿ ಈ ಕ್ಷೇತ್ರ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಜಿತ ಪ್ರಾರ್ಥಿಸಿ, ಮೈಥಿಲಿ ಸ್ವಾಗತಿಸಿದರು. ದೀಕ್ಷಾ ಕಾರ್ಯಕ್ರಮ ನಿರ್ವಹಿಸಿ ಅಶ್ರಿಯ ವಂದಿಸಿದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

2 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

12 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

17 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

17 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

17 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

17 hours ago