Advertisement
ಸುದ್ದಿಗಳು

ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನು ನಿರ್ವಹಿಸುವವರು ದಾದಿಯರು

Share

ಸುಳ್ಯ: ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ  ಬಿ ಎಂ ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳ ಕುರಿತು ಅಗತ್ಯ ಮಾಹಿತಿಯನ್ನೂ ನೀಡುವ ಮೂಲಕ ನರ್ಸಿಂಗ್ ಕ್ಷೇತ್ರದ ಅಗಾಧತೆಯ ಬಗ್ಗೆ ಬೆಳಕು ಚೆಲ್ಲಿದರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ, ಶಿಕ್ಷಕಿಯಾಗಿ, ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ಪ್ರಪಂಚದಲ್ಲಿ ನರ್ಸಿಂಗ್ ಶಿಕ್ಷಣ ಇಂದು ಬಹಳ ಬೇಡಿಕೆಯ ವಿಷಯವಾಗಿದೆ ಮತ್ತು ಸೇವೆ ನೀಡುವ ನಿಟ್ಟಿನಲ್ಲಿ ಈ ಕ್ಷೇತ್ರ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಮಾತನಾಡಿ ಸಂಪಾದನೆಗೆ ಮಾತ್ರ ಸೀಮಿತವಿರುವ ಉದ್ಯೋಗಾವಕಾಶಗಳು ಬಹಳಷ್ಟಿವೆ. ಆದರೆ ಮನುಷ್ಯನಿಗೆ ಸೇವಾ ಮನೋಭಾವದಿಂದ ಉದ್ಯೋಗವನ್ನು ನಿರ್ವಹಿಸುವಲ್ಲಿ ಈ ಕ್ಷೇತ್ರ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಜಿತ ಪ್ರಾರ್ಥಿಸಿ, ಮೈಥಿಲಿ ಸ್ವಾಗತಿಸಿದರು. ದೀಕ್ಷಾ ಕಾರ್ಯಕ್ರಮ ನಿರ್ವಹಿಸಿ ಅಶ್ರಿಯ ವಂದಿಸಿದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago