Advertisement
ಸುದ್ದಿಗಳು

ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನು ನಿರ್ವಹಿಸುವವರು ದಾದಿಯರು

Share

ಸುಳ್ಯ: ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ  ಬಿ ಎಂ ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳ ಕುರಿತು ಅಗತ್ಯ ಮಾಹಿತಿಯನ್ನೂ ನೀಡುವ ಮೂಲಕ ನರ್ಸಿಂಗ್ ಕ್ಷೇತ್ರದ ಅಗಾಧತೆಯ ಬಗ್ಗೆ ಬೆಳಕು ಚೆಲ್ಲಿದರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ, ಶಿಕ್ಷಕಿಯಾಗಿ, ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ಪ್ರಪಂಚದಲ್ಲಿ ನರ್ಸಿಂಗ್ ಶಿಕ್ಷಣ ಇಂದು ಬಹಳ ಬೇಡಿಕೆಯ ವಿಷಯವಾಗಿದೆ ಮತ್ತು ಸೇವೆ ನೀಡುವ ನಿಟ್ಟಿನಲ್ಲಿ ಈ ಕ್ಷೇತ್ರ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಮಾತನಾಡಿ ಸಂಪಾದನೆಗೆ ಮಾತ್ರ ಸೀಮಿತವಿರುವ ಉದ್ಯೋಗಾವಕಾಶಗಳು ಬಹಳಷ್ಟಿವೆ. ಆದರೆ ಮನುಷ್ಯನಿಗೆ ಸೇವಾ ಮನೋಭಾವದಿಂದ ಉದ್ಯೋಗವನ್ನು ನಿರ್ವಹಿಸುವಲ್ಲಿ ಈ ಕ್ಷೇತ್ರ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಜಿತ ಪ್ರಾರ್ಥಿಸಿ, ಮೈಥಿಲಿ ಸ್ವಾಗತಿಸಿದರು. ದೀಕ್ಷಾ ಕಾರ್ಯಕ್ರಮ ನಿರ್ವಹಿಸಿ ಅಶ್ರಿಯ ವಂದಿಸಿದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 hour ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

4 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

8 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago