ಸುಳ್ಯ: ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ ಬಿ ಎಂ ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳ ಕುರಿತು ಅಗತ್ಯ ಮಾಹಿತಿಯನ್ನೂ ನೀಡುವ ಮೂಲಕ ನರ್ಸಿಂಗ್ ಕ್ಷೇತ್ರದ ಅಗಾಧತೆಯ ಬಗ್ಗೆ ಬೆಳಕು ಚೆಲ್ಲಿದರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ, ಶಿಕ್ಷಕಿಯಾಗಿ, ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ಪ್ರಪಂಚದಲ್ಲಿ ನರ್ಸಿಂಗ್ ಶಿಕ್ಷಣ ಇಂದು ಬಹಳ ಬೇಡಿಕೆಯ ವಿಷಯವಾಗಿದೆ ಮತ್ತು ಸೇವೆ ನೀಡುವ ನಿಟ್ಟಿನಲ್ಲಿ ಈ ಕ್ಷೇತ್ರ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಮಾತನಾಡಿ ಸಂಪಾದನೆಗೆ ಮಾತ್ರ ಸೀಮಿತವಿರುವ ಉದ್ಯೋಗಾವಕಾಶಗಳು ಬಹಳಷ್ಟಿವೆ. ಆದರೆ ಮನುಷ್ಯನಿಗೆ ಸೇವಾ ಮನೋಭಾವದಿಂದ ಉದ್ಯೋಗವನ್ನು ನಿರ್ವಹಿಸುವಲ್ಲಿ ಈ ಕ್ಷೇತ್ರ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಜಿತ ಪ್ರಾರ್ಥಿಸಿ, ಮೈಥಿಲಿ ಸ್ವಾಗತಿಸಿದರು. ದೀಕ್ಷಾ ಕಾರ್ಯಕ್ರಮ ನಿರ್ವಹಿಸಿ ಅಶ್ರಿಯ ವಂದಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…