Advertisement
ಸುದ್ದಿಗಳು

ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನು ನಿರ್ವಹಿಸುವವರು ದಾದಿಯರು

Share

ಸುಳ್ಯ: ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ  ಬಿ ಎಂ ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳ ಕುರಿತು ಅಗತ್ಯ ಮಾಹಿತಿಯನ್ನೂ ನೀಡುವ ಮೂಲಕ ನರ್ಸಿಂಗ್ ಕ್ಷೇತ್ರದ ಅಗಾಧತೆಯ ಬಗ್ಗೆ ಬೆಳಕು ಚೆಲ್ಲಿದರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ, ಶಿಕ್ಷಕಿಯಾಗಿ, ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ಪ್ರಪಂಚದಲ್ಲಿ ನರ್ಸಿಂಗ್ ಶಿಕ್ಷಣ ಇಂದು ಬಹಳ ಬೇಡಿಕೆಯ ವಿಷಯವಾಗಿದೆ ಮತ್ತು ಸೇವೆ ನೀಡುವ ನಿಟ್ಟಿನಲ್ಲಿ ಈ ಕ್ಷೇತ್ರ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಮಾತನಾಡಿ ಸಂಪಾದನೆಗೆ ಮಾತ್ರ ಸೀಮಿತವಿರುವ ಉದ್ಯೋಗಾವಕಾಶಗಳು ಬಹಳಷ್ಟಿವೆ. ಆದರೆ ಮನುಷ್ಯನಿಗೆ ಸೇವಾ ಮನೋಭಾವದಿಂದ ಉದ್ಯೋಗವನ್ನು ನಿರ್ವಹಿಸುವಲ್ಲಿ ಈ ಕ್ಷೇತ್ರ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಜಿತ ಪ್ರಾರ್ಥಿಸಿ, ಮೈಥಿಲಿ ಸ್ವಾಗತಿಸಿದರು. ದೀಕ್ಷಾ ಕಾರ್ಯಕ್ರಮ ನಿರ್ವಹಿಸಿ ಅಶ್ರಿಯ ವಂದಿಸಿದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

19 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

24 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago