Advertisement
ಸುದ್ದಿಗಳು

ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನು ನಿರ್ವಹಿಸುವವರು ದಾದಿಯರು

Share

ಸುಳ್ಯ: ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ  ಬಿ ಎಂ ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳ ಕುರಿತು ಅಗತ್ಯ ಮಾಹಿತಿಯನ್ನೂ ನೀಡುವ ಮೂಲಕ ನರ್ಸಿಂಗ್ ಕ್ಷೇತ್ರದ ಅಗಾಧತೆಯ ಬಗ್ಗೆ ಬೆಳಕು ಚೆಲ್ಲಿದರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ, ಶಿಕ್ಷಕಿಯಾಗಿ, ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ಪ್ರಪಂಚದಲ್ಲಿ ನರ್ಸಿಂಗ್ ಶಿಕ್ಷಣ ಇಂದು ಬಹಳ ಬೇಡಿಕೆಯ ವಿಷಯವಾಗಿದೆ ಮತ್ತು ಸೇವೆ ನೀಡುವ ನಿಟ್ಟಿನಲ್ಲಿ ಈ ಕ್ಷೇತ್ರ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಮಾತನಾಡಿ ಸಂಪಾದನೆಗೆ ಮಾತ್ರ ಸೀಮಿತವಿರುವ ಉದ್ಯೋಗಾವಕಾಶಗಳು ಬಹಳಷ್ಟಿವೆ. ಆದರೆ ಮನುಷ್ಯನಿಗೆ ಸೇವಾ ಮನೋಭಾವದಿಂದ ಉದ್ಯೋಗವನ್ನು ನಿರ್ವಹಿಸುವಲ್ಲಿ ಈ ಕ್ಷೇತ್ರ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಜಿತ ಪ್ರಾರ್ಥಿಸಿ, ಮೈಥಿಲಿ ಸ್ವಾಗತಿಸಿದರು. ದೀಕ್ಷಾ ಕಾರ್ಯಕ್ರಮ ನಿರ್ವಹಿಸಿ ಅಶ್ರಿಯ ವಂದಿಸಿದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

10 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

10 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

17 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

18 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago