Advertisement
ಸುದ್ದಿಗಳು

ಸೇವಾ ಭಾರತಿ ವತಿಯಿಂದ ವಿದ್ಯಾನಿಧಿ ವಿತರಣೆ

Share

ಮಡಿಕೇರಿ : 2018ರ ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂದರ್ಭ ಸಂಕಷ್ಟಕ್ಕೀಡಾದ ಕುಟುಂಬದ ವಿದ್ಯಾರ್ಥಿಗಳಿಗೆ ಕೊಡಗು ಸೇವಾ ಭಾರತಿ ಹಾಗೂ ಬೆಂಗಳೂರಿನ ಉತ್ತರ ಕರ್ನಾಟಕ ಸ್ನೇಹ ಲೋಕ ಸಂಸ್ಥೆಯ ವತಿಯಿಂದ ವಿದ್ಯಾನಿಧಿ ಸಹಾಯಧನವನ್ನು ವಿತರಿಸಲಾಯಿತು.

Advertisement

ನಗರದ ಕಾಫಿ ಕೃಪಾ ಕಟ್ಟಡದಲ್ಲಿರುವ ಸೇವಾ ಭಾರತಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಕರ್ನಾಟಕ ಸ್ನೇಹ ಲೋಕ ಸಂಸ್ಥೆಯ ಖಜಾಂಚಿ ಪ್ರಕಾಶ್ ಸಿ. ರಾಜಗೊಳಿ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಿಸಿ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ದುರಂತ ಸಂಭವಿಸಿದ ತಕ್ಷಣ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಜನರಿಂದ ಧನ ಸಂಗ್ರಹ ಮಾಡಿ ಶಿಕ್ಷಣಕ್ಕೆ ಆಧ್ಯತೆ ಕೊಟ್ಟು ವಿತರಿಸುವ ಯೋಜನೆಯಿತ್ತು. ಆದರೆ ಇಲ್ಲಿ ಬೇರೆ ಬೇರೆ ಸಂಘ – ಸಂಸ್ಥೆಗಳು ಆ ಸಂದರ್ಭ ವಿತರಿಸಿದ ಪರಿಣಾಮ ನಮ್ಮ ಸಂಸ್ಥೆಯು ಇಲ್ಲಿನ ಸೇವಾ ಭಾರತಿ ಸಂಸ್ಥೆಯ ಸಹಯೋಗದೊಂದಿಗೆ ಎಲ್ಲಾ ವಿದ್ಯಾರ್ಥಿಗಳ ಮನೆಯ ಪರಿಸ್ಥಿಯನ್ನು ಅವಲೋಕಿಸಿ ಇಂದು ವಿತರಣೆ ಮಾಡುತ್ತಿದ್ದೇವೆ. ಸಮಾಜದ ಹಣವನ್ನು ಪ್ರಾಮಾಣಿಕತೆಯಿಂದ ಇಂದು ಸಮಾಜದ ನಿರಾಶ್ರಿತ ಬಂಧುಗಳಿಗೆ ತಲುಪಿಸುವ ಕೆಲಸವನ್ನು ಮಾತ್ರ ನಮ್ಮ ಸಂಸ್ಥೆ ಮಾಡುತ್ತಿದೆ. ಸಮಾಜದ ನೋವಿಗೆ ಸ್ಪಂಧಿಸುವುದು ಎಲ್ಲರ ಕರ್ತವ್ಯ ಎಂದರು.

ಸೇವಾ ಭಾರತಿ ಸಂಸ್ಥೆಯ ಉಪಾಧ್ಯಕ್ಷ ಕೆ.ಕೆ.ಮಹೇಶ್‍ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ವಿದ್ಯಾಸಂಸ್ಥೆಯಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪ ನಿರಾಶ್ರಿತರಾದ 45 ಮಂದಿ ವಿದ್ಯಾರ್ಥಿಗಳು ಸೇವಾ ಭಾರತಿ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯಾಭ್ಯಾಸ ಮಾಡುತ್ತಿರುವುದನ್ನು ಮಹೇಶ್‍ಕುಮಾರ್ ನೆನಪಿಸಿಕೊಂಡರು.
ಮದೆ, ಮೊಣ್ಣಂಗೇರಿ, ಕಾಲೂರು, ಎಮ್ಮೆತ್ತಾಳು, ಮೇಘತ್ತಾಳು, ಹೊದಕಾನ, ಕಿರಗಂದೂರು ಗ್ರಾಮಗಳ ಪ್ರಕೃತಿ ವಿಕೋಪ ಸಂಕಷ್ಟಕ್ಕೆ ಒಳಗಾದ 30 ಮಂದಿ ವಿದ್ಯಾರ್ಥಿಗಳಿಗೆ ಈ ಸಂದರ್ಭ ವಿದ್ಯಾನಿಧಿ ಸಹಾಯಧನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಸ್ನೇಹ ಲೋಕ ಸಂಸ್ಥೆಯ ಟ್ರಸ್ಟಿ ಕುಮಾರ್ ಹಂದೂರ್, ಅವರ ಪುತ್ರ ನಂದೀಶ್ ಹಂದೂರು, ಗಾಳಿಬೀಡು ಗ್ರಾ.ಪಂ ಸದಸ್ಯ ಧನಂಜಯ, ವಿದ್ಯಾರ್ಥಿಗಳ ಪೋಷಕರು ಹಾಗೂ ಇತರರು ಇದ್ದರು. ಸೇವಾ ಭಾರತಿ ಸಂಸ್ಥೆಯ ಚಂದ್ರ ಉಡೋತ್ ಕಾರ್ಯಕ್ರಮ ನಿರೂಪಿಸಿದರೆ, ಖಜಾಂಚಿ ಡಿ.ಹೆಚ್.ತಮ್ಮಪ್ಪ ವಂದಿಸಿದರು. ಕೊನೆಯಲ್ಲಿ ಶಾಂತಿಮಂತ್ರವನ್ನು ಪಠಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

4 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

4 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

5 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

16 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago