Advertisement
ಅನುಕ್ರಮ

ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಇರಲಿ ಎಚ್ಚರ

Share

ಮಳೆಗಾಲ ಶುರುವಾಯಿತೆಂದರೆ ಸೊಳ್ಳೆಗಳ ಕಾಟ. ಅದರ ಜೊತೆಗೇ ಆರಂಭವಾಗುತ್ತದೆ ರೋಗಗಳ ಕಾಟ. ಈ ಸಂದರ್ಭ ಎಚ್ಚರ ಇರಬೇಕಾದ್ದು ತೀರಾ ಅಗತ್ಯ.

ಮಲೇರಿಯಾ:

ಮಲೇರಿಯಾ ರೋಗಾಣುವನ್ನು ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.

ಲಕ್ಷಣಗಳು: ಪ್ರತಿದಿನ ಅಥವಾ ದಿನ ಬಿಟ್ಟು ವಿಪರೀತ ಚಳಿಯಿಂದ ಕೂಡಿದ ಜ್ವರ, ವಿಪರೀತ ತಲೆನೋವು, ವಾಂತಿ ,ಮೈಕೈನೋವು ,ಅತಿಯಾದ ಬೆವರುವಿಕೆ ಸಹಿತ ಜ್ವರವು ಇಳಿಮುಖವಾದಾಗ ತುಂಬಾ ಬಳಲಿಕೆ.

ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆ:  ರಕ್ತ ಪರೀಕ್ಷೆಯ ಮೂಲಕ ಮಲೇರಿಯಾ ಖಚಿತಗೊಂಡರೆ, ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ರಕ್ತಪರೀಕ್ಷೆಯಲ್ಲಿ ಮಲೇರಿಯಾ ಸ್ಮಿಯರ್ ಟೆಸ್ಟ್ ಗಿಂತ ಮಲೇರಿಯಾ ಕ್ಯೂ. ಬಿ. ಸಿ. ಟೆಸ್ಟ್ ಮಲೇರಿಯಾ ಪತ್ತೆಹಚ್ಚುವಲ್ಲಿ ಹೆಚ್ಚು ಖಚಿತವಾಗಿರುತ್ತದೆ. ಪ್ಲಾಸ್ಮೊಡಿಯಂ ವೈವಾಕ್ಸ್ ಮಲೇರಿಯಾಗಿಂತ ಪ್ಲಾಸ್ಮೊಡಿಯಂ ಫಾಲ್ಸಿ ಫಾರಂ ಜಾತಿಯ ಮಲೇರಿಯಾವು ಹೆಚ್ಚು ಅಪಾಯಕಾರಿಯಾಗಿರುತ್ತದೆ.

ಡೆಂಘೆ:

ಡೆಂಘೆ ರೋಗಕ್ಕೆ ಕಾರಣವಾದ ವೈರಸ್ ರೋಗಾಣುವನ್ನು ಈಡೀಸ್ ಈಜಿಪ್ಟಿ ಎಂಬ ಸೊಳ್ಳೆಯು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.

ಲಕ್ಷಣಗಳು: ತೀವ್ರ ಜ್ವರ, ಕಣ್ಣುಗಳು ಕೆಂಪಾಗುವಿಕೆ, ಸ್ನಾಯು ನೋವು, ಸಂದುಗಳಲ್ಲಿ ಅಸಾಧ್ಯ ನೋವಿನಿಂದ ಕೈಕಾಲುಗಳನ್ನು ಅಲ್ಲಾಡಿಸಲು ಕಷ್ಟವಾಗುವುದು, ಕಂಠದಲ್ಲಿ ಬಾವು ಕಾಣಿಸಿಕೊಳ್ಳಬಹುದು ,ಕಾಯಿಲೆ ಗಂಭೀರವಾದಾಗ., ಪ್ಲೇಟ್ಲೆಟ್ ಕಣಗಳ ಸಂಖ್ಯೆ ರಕ್ತದಲ್ಲಿ ಗಮನಾರ್ಹವಾಗಿ ಕಡಿಮೆ ಆಗುವುದರಿಂದ ದೇಹದ ಒಳಗಿನ ಭಾಗಗಳಲ್ಲಿ ರಕ್ತಸ್ರಾವ ಉಂಟಾಗುವುದರಿಂದ ಅಪಾಯ ಸಂಭವಿಸಬಹುದು.

ಚಿಕಿತ್ಸೆ: ಡೆಂಘೆ ವೈರಸ್ ರೋಗಾಣುಗಳನ್ನು ಕೊಲ್ಲುವಂತಹ ಯಾವುದೇ ಔಷಧ ಲಭ್ಯವಿಲ್ಲ. ಬಾರದಂತೆ ತಡೆಗಟ್ಟುವ ಲಸಿಕೆ ಇರುವುದಿಲ್ಲ. ಲಕ್ಷಣಗಳನ್ನು ಹೊಂದಿಕೊಂಡು ರೋಗಿಯ ಅವಸ್ಥೆಗೆ ಅನುಸಾರ ನೀಡಬೇಕಾಗುತ್ತದೆ. ರೋಗಿಯು ಪೌಷ್ಟಿಕ ಆಹಾರ ಸೇವನೆ ಹಾಗೂ ದುರಭ್ಯಾಸಗಳಿಂದ ದೂರ ಇರುವ ಮೂಲಕ ಹಾಗೂ ಉತ್ತಮ ಜೀವನ ಶೈಲಿಯಿಂದ ರೋಗನಿರೋಧಕ ಶಕ್ತಿ ಹೊಂದಿದ್ದಲ್ಲಿ ರೋಗದ ತೀವ್ರತೆ ಕಡಿಮೆ ಇರುತ್ತದೆ.

ತಡೆಗಟ್ಟುವಿಕೆ: ಯಾವುದೇ ಜ್ವರ 3 ದಿನಗಳಿಗಿಂತ ಹೆಚ್ಚಿಗೆ ಮುಂದುವರಿದಲ್ಲಿ ಅಸಡ್ಡೆ ಮಾಡದೆ ತಪಾಸಣೆಗೆ ಒಳಪಡಬೇಕು. ವೈದ್ಯರು ನೀಡಿದ ಔಷಧಗಳನ್ನು ಸರಿಯಾದ ಪ್ರಮಾಣದಲ್ಲಿ ವೈದ್ಯರು ಹೇಳಿದಷ್ಟು ದಿನ ಸೇವಿಸಬೇಕು. ಮಲೇರಿಯಾ ಚಿಕಿತ್ಸೆಗೆ ಸರಕಾರಿ ಆಸ್ಪತ್ರೆಯಲ್ಲಿ ಔಷಧಗಳು ಸದಾ ಲಭ್ಯವಿರುತ್ತದೆ.

ಮಲೇರಿಯಾ ಮತ್ತು ಡೆಂಘೆ ಎರಡು ರೋಗಗಳನ್ನು, ಸೊಳ್ಳೆಗಳ ಉತ್ಪಾದನೆಯನ್ನು ನಿಯಂತ್ರಿಸುವುದರ ಮೂಲಕ ತಡೆಗಟ್ಟಬಹುದು. ಇದಕ್ಕಾಗಿ ಈ ಕೆಳಗಿನ ವಿಧಾನಗಳನ್ನು ಅನುಸರಿಸಬೇಕು.

1. ನೀರಿನ ತೊಟ್ಟಿಗಳು, ಬ್ಯಾರೆಲ್ ಗಳು ,ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿಮಾಡಿ ಸ್ವಚ್ಛ ಪಡಿಸಿ ಮತ್ತೆ ಭರ್ತಿ ಮಾಡುವುದು. ಅವುಗಳನ್ನು ಮುಚ್ಚಳದಿಂದ ಮುಚ್ಚುವುದು.
2. ಬಯಲಿನಲ್ಲಿರುವ ತ್ಯಾಜ್ಯವಸ್ತುಗಳಾದ ಟೈಯರ್ ,ಎಳನೀರಿನ ಚಿಪ್ಪು ,ಒಡೆದ ಬಾಟಲಿ, ಹಳೆಯ ಡಬ್ಬಿಗಳು, ತೆಂಗಿನಕಾಯಿ ಗೆರಟೆ, ನೀರಿನ ಟ್ಯಾಂಕಿ , ತಾರಸಿ ಮನೆಯ ಮೇಲ್ಚಾವಣಿ ಮುಂತಾದವುಗಳಲ್ಲಿ ಮಳೆನೀರು ಸಂಗ್ರಹ ವಾಗದಂತೆ ಎಚ್ಚರಿಕೆವಹಿಸುವುದು ಅಥವಾ ಅವುಗಳಿಗೆ ಸೂಕ್ತ ವಿಲೇವಾರಿ ಮಾಡುವುದು. ಏಕೆಂದರೆ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.
3. ಸೊಳ್ಳೆ ನಿರೋಧಕಗಳು ಹಾಗೂ ಸೊಳ್ಳೆ ಪರದೆಯನ್ನು ಬಳಸುವುದು ಸೊಳ್ಳೆಗಳ ಕಚ್ಚುವಿಕೆ ಯಿಂದ ದೂರವಿರುವುದು, ಇದಕ್ಕಾಗಿ ಶರೀರದ ಭಾಗಗಳನ್ನು ಆದಷ್ಟು ಬಟ್ಟೆಗಳಿಂದ ಮುಚ್ಚುವುದು. ವಿದ್ಯುತ್ ಬೋರ್ಡಿಗೆ ಅಳವಡಿಸುವ ಪರ್ಮಿತ್ರಿನ್ ದ್ರವವು ಸೊಳ್ಳೆಗಳನ್ನು ಸಾಯಿಸುವುದು. ಇದು ಮಾರುಕಟ್ಟೆಯಲ್ಲಿ ಲಭ್ಯವಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

10 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

10 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

17 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

18 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago