MIRROR FOCUS

ಸೋಣೆ ಹಬ್ಬ ( ಆಗಸ್ಟ್ 16)

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಬ್ಬಗಳೆಂದರೆ ಹೆಣ್ಣು ಮಕ್ಕಳಿಗೆ ಯಾವಾಗಲೂ ಸಂಭ್ರಮವೇ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ವಿಶೇಷತೆಯಿದೆ. ಅದರಲ್ಲೂ ಕರಾವಳಿಯ ಹೆಣ್ಣು ಮಕ್ಕಳಿಗೆ ಸೋಣೆ ತಿಂಗಳೆಂದರೆ ವಿಶೇಷವಾದುದು. ಇದು ಶ್ರಾವಣ ಮಾಸದ ಸಿಂಹ ಸಂಕ್ರಮಣದ ದಿನ., ಸೋಣೆ ಸಂಕ್ರಾಂತಿ ಹೆಂಗೆಳೆಯರಿಗೆ ನೇರವಾಗಿ ಸಂಭಂದಿಸಿದ ವಿಶೇಷವಾದ ಹಬ್ಬ… .

Advertisement

ಹೊಸ್ತಿಲಿಗೆ ರಂಗೋಲಿ ಬರೆದು, ಕುಂಕುಮ, ಅರಶಿನ ಹಚ್ಚಿ ಹೂ ಇಟ್ಟು ನಮಸ್ಕರಿಸಿ ಪೂಜಿಸುವುದು ಸುಮಂಗಲಿಯರು ನಿತ್ಯವೂ ನಿರ್ವಹಿಸುವ ಅಭ್ಯಾಸ. ನಿತ್ಯ ಯಾವುದೇ ಸಾದಾ ಪುಷ್ಪವನ್ನು ಹೊಸಿಲಿಗೆ ಇಟ್ಟು ನಮಸ್ಕರಿಸಲಾಗುತ್ತದೆ. ಆದರೆ ಸೋಣೆ ತಿಂಗಳಲ್ಲಿ ನೈವೇದ್ಯವನ್ನೂ , ಅರ್ಪಿಸಲಾಗುತ್ತದೆ. ಮುಂಜಾನೆಯೇ ಶುಚಿರ್ಭೂತರಾಗಿ, ಹೊಸ್ತಿಲುಗಳನ್ನು ಶುಚಿಗೊಳಿಸಲಾಗುತ್ತದೆ. ಆಮೇಲೆ ಹೊಸ್ತಿಲಿನ ಎರಡೂ ಬದಿಗಳಿಗೆ ರಂಗೋಲಿಗಳನ್ನು ಹಾಕಿ ಹೂಗಳಿಂದ ಸಿಂಗರಿಸಲಾಗುತ್ತದೆ. ಹೂವೆಂದರೆ ಸೋಣೆ ಹೂ( ನೀರು‌ಕಡ್ಡಿ ಹೂ), ಕಾಯಿಹಿಂಡಿಗೆ( ಅರಶಿನ ಬಣ್ಣದ ಹೂ ಇರುವ ಗಿಡ) ಹೂ, ಕೆರಮಣೆ ಸೊಪ್ಪುಗಳನ್ನು ಬಳಸಲಾಗುತ್ತದೆ. ಜೊತೆಗೆ ಹಿಂದಿನ ‌ರಾತ್ರಿಯೇ ಸಿದ್ಧಪಡಿಸಿಟ್ಟು ಕೊಂಡ ಹುರಿದ ಹಲಸಿನ ಬೇಳೆ, ಗೇರುಬೀಜ ಹಾಗೂ ತೆಂಗಿನ ಕಾಯಿ ಒಡೆದು, ಒಂದು ತಂಬಿಗೆ ನೀರುಗಳನ್ನೆಲ್ಲಾ ಇಟ್ಟು ನೈವೇದ್ಯ ಸಲ್ಲಿಸಲಾಗುತ್ತದೆ. ಹೊಸ್ತಿಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಲಾಗುತ್ತದೆ. ಸೋಣೆ ತಿಂಗಳುದ್ದಕ್ಕೂ ಹೂಗಳನ್ನಿಟ್ಟು ಅಡ್ಡಬೀಳುವ ಸಂಪ್ರದಾಯವಿದೆ . ಈ ಪದ್ಧತಿಯನ್ನು ಕೆಲವು ಮನೆಗಳಲ್ಲಿ ಇಂದಿಗೂ ಆಚರಿಸುತ್ತಾರೆ. ಆದರೆ ಹಲಸಿನ ಬೀಜ, ಗೇರುಬೀಜಗಳನ್ನು ಸೋಣೆ ಸಂಕ್ರಾಂತಿಯಂದು ಮಾತ್ರ ನೈವೇದ್ಯ ಮಾಡಲಾಗುತ್ತದೆ. ಉಳಿದ ದಿನಗಳಲ್ಲಿ ಸೋಣೆ ಹೂ ಹಾಗೂ ಕಾಯಿ ಹಿಂಡಿಗೆ ಹೂಗಳನ್ನು ‌ಇಟ್ಟು ನಮಸ್ಕರಿಸಿ ಮನೆಗೆ, ಮನೆಯವರ ಒಳಿತಿಗಾಗಿ‌ ಹಾರೈಸುವ ಪದ್ಧತಿ ಬಳಕೆಯಲ್ಲಿದೆ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

1 hour ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

9 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

9 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

17 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

19 hours ago