Advertisement
MIRROR FOCUS

ಸೋಣೆ ಹಬ್ಬ ( ಆಗಸ್ಟ್ 16)

Share

ಹಬ್ಬಗಳೆಂದರೆ ಹೆಣ್ಣು ಮಕ್ಕಳಿಗೆ ಯಾವಾಗಲೂ ಸಂಭ್ರಮವೇ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ವಿಶೇಷತೆಯಿದೆ. ಅದರಲ್ಲೂ ಕರಾವಳಿಯ ಹೆಣ್ಣು ಮಕ್ಕಳಿಗೆ ಸೋಣೆ ತಿಂಗಳೆಂದರೆ ವಿಶೇಷವಾದುದು. ಇದು ಶ್ರಾವಣ ಮಾಸದ ಸಿಂಹ ಸಂಕ್ರಮಣದ ದಿನ., ಸೋಣೆ ಸಂಕ್ರಾಂತಿ ಹೆಂಗೆಳೆಯರಿಗೆ ನೇರವಾಗಿ ಸಂಭಂದಿಸಿದ ವಿಶೇಷವಾದ ಹಬ್ಬ… .

ಹೊಸ್ತಿಲಿಗೆ ರಂಗೋಲಿ ಬರೆದು, ಕುಂಕುಮ, ಅರಶಿನ ಹಚ್ಚಿ ಹೂ ಇಟ್ಟು ನಮಸ್ಕರಿಸಿ ಪೂಜಿಸುವುದು ಸುಮಂಗಲಿಯರು ನಿತ್ಯವೂ ನಿರ್ವಹಿಸುವ ಅಭ್ಯಾಸ. ನಿತ್ಯ ಯಾವುದೇ ಸಾದಾ ಪುಷ್ಪವನ್ನು ಹೊಸಿಲಿಗೆ ಇಟ್ಟು ನಮಸ್ಕರಿಸಲಾಗುತ್ತದೆ. ಆದರೆ ಸೋಣೆ ತಿಂಗಳಲ್ಲಿ ನೈವೇದ್ಯವನ್ನೂ , ಅರ್ಪಿಸಲಾಗುತ್ತದೆ. ಮುಂಜಾನೆಯೇ ಶುಚಿರ್ಭೂತರಾಗಿ, ಹೊಸ್ತಿಲುಗಳನ್ನು ಶುಚಿಗೊಳಿಸಲಾಗುತ್ತದೆ. ಆಮೇಲೆ ಹೊಸ್ತಿಲಿನ ಎರಡೂ ಬದಿಗಳಿಗೆ ರಂಗೋಲಿಗಳನ್ನು ಹಾಕಿ ಹೂಗಳಿಂದ ಸಿಂಗರಿಸಲಾಗುತ್ತದೆ. ಹೂವೆಂದರೆ ಸೋಣೆ ಹೂ( ನೀರು‌ಕಡ್ಡಿ ಹೂ), ಕಾಯಿಹಿಂಡಿಗೆ( ಅರಶಿನ ಬಣ್ಣದ ಹೂ ಇರುವ ಗಿಡ) ಹೂ, ಕೆರಮಣೆ ಸೊಪ್ಪುಗಳನ್ನು ಬಳಸಲಾಗುತ್ತದೆ. ಜೊತೆಗೆ ಹಿಂದಿನ ‌ರಾತ್ರಿಯೇ ಸಿದ್ಧಪಡಿಸಿಟ್ಟು ಕೊಂಡ ಹುರಿದ ಹಲಸಿನ ಬೇಳೆ, ಗೇರುಬೀಜ ಹಾಗೂ ತೆಂಗಿನ ಕಾಯಿ ಒಡೆದು, ಒಂದು ತಂಬಿಗೆ ನೀರುಗಳನ್ನೆಲ್ಲಾ ಇಟ್ಟು ನೈವೇದ್ಯ ಸಲ್ಲಿಸಲಾಗುತ್ತದೆ. ಹೊಸ್ತಿಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಲಾಗುತ್ತದೆ. ಸೋಣೆ ತಿಂಗಳುದ್ದಕ್ಕೂ ಹೂಗಳನ್ನಿಟ್ಟು ಅಡ್ಡಬೀಳುವ ಸಂಪ್ರದಾಯವಿದೆ . ಈ ಪದ್ಧತಿಯನ್ನು ಕೆಲವು ಮನೆಗಳಲ್ಲಿ ಇಂದಿಗೂ ಆಚರಿಸುತ್ತಾರೆ. ಆದರೆ ಹಲಸಿನ ಬೀಜ, ಗೇರುಬೀಜಗಳನ್ನು ಸೋಣೆ ಸಂಕ್ರಾಂತಿಯಂದು ಮಾತ್ರ ನೈವೇದ್ಯ ಮಾಡಲಾಗುತ್ತದೆ. ಉಳಿದ ದಿನಗಳಲ್ಲಿ ಸೋಣೆ ಹೂ ಹಾಗೂ ಕಾಯಿ ಹಿಂಡಿಗೆ ಹೂಗಳನ್ನು ‌ಇಟ್ಟು ನಮಸ್ಕರಿಸಿ ಮನೆಗೆ, ಮನೆಯವರ ಒಳಿತಿಗಾಗಿ‌ ಹಾರೈಸುವ ಪದ್ಧತಿ ಬಳಕೆಯಲ್ಲಿದೆ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

23 minutes ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

39 minutes ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

59 minutes ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

7 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

9 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

9 hours ago