Advertisement
MIRROR FOCUS

ಸೋಣೆ ಹಬ್ಬ ( ಆಗಸ್ಟ್ 16)

Share

ಹಬ್ಬಗಳೆಂದರೆ ಹೆಣ್ಣು ಮಕ್ಕಳಿಗೆ ಯಾವಾಗಲೂ ಸಂಭ್ರಮವೇ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ವಿಶೇಷತೆಯಿದೆ. ಅದರಲ್ಲೂ ಕರಾವಳಿಯ ಹೆಣ್ಣು ಮಕ್ಕಳಿಗೆ ಸೋಣೆ ತಿಂಗಳೆಂದರೆ ವಿಶೇಷವಾದುದು. ಇದು ಶ್ರಾವಣ ಮಾಸದ ಸಿಂಹ ಸಂಕ್ರಮಣದ ದಿನ., ಸೋಣೆ ಸಂಕ್ರಾಂತಿ ಹೆಂಗೆಳೆಯರಿಗೆ ನೇರವಾಗಿ ಸಂಭಂದಿಸಿದ ವಿಶೇಷವಾದ ಹಬ್ಬ… .

Advertisement

ಹೊಸ್ತಿಲಿಗೆ ರಂಗೋಲಿ ಬರೆದು, ಕುಂಕುಮ, ಅರಶಿನ ಹಚ್ಚಿ ಹೂ ಇಟ್ಟು ನಮಸ್ಕರಿಸಿ ಪೂಜಿಸುವುದು ಸುಮಂಗಲಿಯರು ನಿತ್ಯವೂ ನಿರ್ವಹಿಸುವ ಅಭ್ಯಾಸ. ನಿತ್ಯ ಯಾವುದೇ ಸಾದಾ ಪುಷ್ಪವನ್ನು ಹೊಸಿಲಿಗೆ ಇಟ್ಟು ನಮಸ್ಕರಿಸಲಾಗುತ್ತದೆ. ಆದರೆ ಸೋಣೆ ತಿಂಗಳಲ್ಲಿ ನೈವೇದ್ಯವನ್ನೂ , ಅರ್ಪಿಸಲಾಗುತ್ತದೆ. ಮುಂಜಾನೆಯೇ ಶುಚಿರ್ಭೂತರಾಗಿ, ಹೊಸ್ತಿಲುಗಳನ್ನು ಶುಚಿಗೊಳಿಸಲಾಗುತ್ತದೆ. ಆಮೇಲೆ ಹೊಸ್ತಿಲಿನ ಎರಡೂ ಬದಿಗಳಿಗೆ ರಂಗೋಲಿಗಳನ್ನು ಹಾಕಿ ಹೂಗಳಿಂದ ಸಿಂಗರಿಸಲಾಗುತ್ತದೆ. ಹೂವೆಂದರೆ ಸೋಣೆ ಹೂ( ನೀರು‌ಕಡ್ಡಿ ಹೂ), ಕಾಯಿಹಿಂಡಿಗೆ( ಅರಶಿನ ಬಣ್ಣದ ಹೂ ಇರುವ ಗಿಡ) ಹೂ, ಕೆರಮಣೆ ಸೊಪ್ಪುಗಳನ್ನು ಬಳಸಲಾಗುತ್ತದೆ. ಜೊತೆಗೆ ಹಿಂದಿನ ‌ರಾತ್ರಿಯೇ ಸಿದ್ಧಪಡಿಸಿಟ್ಟು ಕೊಂಡ ಹುರಿದ ಹಲಸಿನ ಬೇಳೆ, ಗೇರುಬೀಜ ಹಾಗೂ ತೆಂಗಿನ ಕಾಯಿ ಒಡೆದು, ಒಂದು ತಂಬಿಗೆ ನೀರುಗಳನ್ನೆಲ್ಲಾ ಇಟ್ಟು ನೈವೇದ್ಯ ಸಲ್ಲಿಸಲಾಗುತ್ತದೆ. ಹೊಸ್ತಿಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಲಾಗುತ್ತದೆ. ಸೋಣೆ ತಿಂಗಳುದ್ದಕ್ಕೂ ಹೂಗಳನ್ನಿಟ್ಟು ಅಡ್ಡಬೀಳುವ ಸಂಪ್ರದಾಯವಿದೆ . ಈ ಪದ್ಧತಿಯನ್ನು ಕೆಲವು ಮನೆಗಳಲ್ಲಿ ಇಂದಿಗೂ ಆಚರಿಸುತ್ತಾರೆ. ಆದರೆ ಹಲಸಿನ ಬೀಜ, ಗೇರುಬೀಜಗಳನ್ನು ಸೋಣೆ ಸಂಕ್ರಾಂತಿಯಂದು ಮಾತ್ರ ನೈವೇದ್ಯ ಮಾಡಲಾಗುತ್ತದೆ. ಉಳಿದ ದಿನಗಳಲ್ಲಿ ಸೋಣೆ ಹೂ ಹಾಗೂ ಕಾಯಿ ಹಿಂಡಿಗೆ ಹೂಗಳನ್ನು ‌ಇಟ್ಟು ನಮಸ್ಕರಿಸಿ ಮನೆಗೆ, ಮನೆಯವರ ಒಳಿತಿಗಾಗಿ‌ ಹಾರೈಸುವ ಪದ್ಧತಿ ಬಳಕೆಯಲ್ಲಿದೆ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

5 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

5 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

6 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

6 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

15 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago