Advertisement
MIRROR FOCUS

ಸೋಣೆ ಹಬ್ಬ ( ಆಗಸ್ಟ್ 16)

Share

ಹಬ್ಬಗಳೆಂದರೆ ಹೆಣ್ಣು ಮಕ್ಕಳಿಗೆ ಯಾವಾಗಲೂ ಸಂಭ್ರಮವೇ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ವಿಶೇಷತೆಯಿದೆ. ಅದರಲ್ಲೂ ಕರಾವಳಿಯ ಹೆಣ್ಣು ಮಕ್ಕಳಿಗೆ ಸೋಣೆ ತಿಂಗಳೆಂದರೆ ವಿಶೇಷವಾದುದು. ಇದು ಶ್ರಾವಣ ಮಾಸದ ಸಿಂಹ ಸಂಕ್ರಮಣದ ದಿನ., ಸೋಣೆ ಸಂಕ್ರಾಂತಿ ಹೆಂಗೆಳೆಯರಿಗೆ ನೇರವಾಗಿ ಸಂಭಂದಿಸಿದ ವಿಶೇಷವಾದ ಹಬ್ಬ… .

ಹೊಸ್ತಿಲಿಗೆ ರಂಗೋಲಿ ಬರೆದು, ಕುಂಕುಮ, ಅರಶಿನ ಹಚ್ಚಿ ಹೂ ಇಟ್ಟು ನಮಸ್ಕರಿಸಿ ಪೂಜಿಸುವುದು ಸುಮಂಗಲಿಯರು ನಿತ್ಯವೂ ನಿರ್ವಹಿಸುವ ಅಭ್ಯಾಸ. ನಿತ್ಯ ಯಾವುದೇ ಸಾದಾ ಪುಷ್ಪವನ್ನು ಹೊಸಿಲಿಗೆ ಇಟ್ಟು ನಮಸ್ಕರಿಸಲಾಗುತ್ತದೆ. ಆದರೆ ಸೋಣೆ ತಿಂಗಳಲ್ಲಿ ನೈವೇದ್ಯವನ್ನೂ , ಅರ್ಪಿಸಲಾಗುತ್ತದೆ. ಮುಂಜಾನೆಯೇ ಶುಚಿರ್ಭೂತರಾಗಿ, ಹೊಸ್ತಿಲುಗಳನ್ನು ಶುಚಿಗೊಳಿಸಲಾಗುತ್ತದೆ. ಆಮೇಲೆ ಹೊಸ್ತಿಲಿನ ಎರಡೂ ಬದಿಗಳಿಗೆ ರಂಗೋಲಿಗಳನ್ನು ಹಾಕಿ ಹೂಗಳಿಂದ ಸಿಂಗರಿಸಲಾಗುತ್ತದೆ. ಹೂವೆಂದರೆ ಸೋಣೆ ಹೂ( ನೀರು‌ಕಡ್ಡಿ ಹೂ), ಕಾಯಿಹಿಂಡಿಗೆ( ಅರಶಿನ ಬಣ್ಣದ ಹೂ ಇರುವ ಗಿಡ) ಹೂ, ಕೆರಮಣೆ ಸೊಪ್ಪುಗಳನ್ನು ಬಳಸಲಾಗುತ್ತದೆ. ಜೊತೆಗೆ ಹಿಂದಿನ ‌ರಾತ್ರಿಯೇ ಸಿದ್ಧಪಡಿಸಿಟ್ಟು ಕೊಂಡ ಹುರಿದ ಹಲಸಿನ ಬೇಳೆ, ಗೇರುಬೀಜ ಹಾಗೂ ತೆಂಗಿನ ಕಾಯಿ ಒಡೆದು, ಒಂದು ತಂಬಿಗೆ ನೀರುಗಳನ್ನೆಲ್ಲಾ ಇಟ್ಟು ನೈವೇದ್ಯ ಸಲ್ಲಿಸಲಾಗುತ್ತದೆ. ಹೊಸ್ತಿಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಲಾಗುತ್ತದೆ. ಸೋಣೆ ತಿಂಗಳುದ್ದಕ್ಕೂ ಹೂಗಳನ್ನಿಟ್ಟು ಅಡ್ಡಬೀಳುವ ಸಂಪ್ರದಾಯವಿದೆ . ಈ ಪದ್ಧತಿಯನ್ನು ಕೆಲವು ಮನೆಗಳಲ್ಲಿ ಇಂದಿಗೂ ಆಚರಿಸುತ್ತಾರೆ. ಆದರೆ ಹಲಸಿನ ಬೀಜ, ಗೇರುಬೀಜಗಳನ್ನು ಸೋಣೆ ಸಂಕ್ರಾಂತಿಯಂದು ಮಾತ್ರ ನೈವೇದ್ಯ ಮಾಡಲಾಗುತ್ತದೆ. ಉಳಿದ ದಿನಗಳಲ್ಲಿ ಸೋಣೆ ಹೂ ಹಾಗೂ ಕಾಯಿ ಹಿಂಡಿಗೆ ಹೂಗಳನ್ನು ‌ಇಟ್ಟು ನಮಸ್ಕರಿಸಿ ಮನೆಗೆ, ಮನೆಯವರ ಒಳಿತಿಗಾಗಿ‌ ಹಾರೈಸುವ ಪದ್ಧತಿ ಬಳಕೆಯಲ್ಲಿದೆ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

3 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

8 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

13 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago