Advertisement
MIRROR FOCUS

ಸೋಣೆ ಹಬ್ಬ ( ಆಗಸ್ಟ್ 16)

Share

ಹಬ್ಬಗಳೆಂದರೆ ಹೆಣ್ಣು ಮಕ್ಕಳಿಗೆ ಯಾವಾಗಲೂ ಸಂಭ್ರಮವೇ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ವಿಶೇಷತೆಯಿದೆ. ಅದರಲ್ಲೂ ಕರಾವಳಿಯ ಹೆಣ್ಣು ಮಕ್ಕಳಿಗೆ ಸೋಣೆ ತಿಂಗಳೆಂದರೆ ವಿಶೇಷವಾದುದು. ಇದು ಶ್ರಾವಣ ಮಾಸದ ಸಿಂಹ ಸಂಕ್ರಮಣದ ದಿನ., ಸೋಣೆ ಸಂಕ್ರಾಂತಿ ಹೆಂಗೆಳೆಯರಿಗೆ ನೇರವಾಗಿ ಸಂಭಂದಿಸಿದ ವಿಶೇಷವಾದ ಹಬ್ಬ… .

ಹೊಸ್ತಿಲಿಗೆ ರಂಗೋಲಿ ಬರೆದು, ಕುಂಕುಮ, ಅರಶಿನ ಹಚ್ಚಿ ಹೂ ಇಟ್ಟು ನಮಸ್ಕರಿಸಿ ಪೂಜಿಸುವುದು ಸುಮಂಗಲಿಯರು ನಿತ್ಯವೂ ನಿರ್ವಹಿಸುವ ಅಭ್ಯಾಸ. ನಿತ್ಯ ಯಾವುದೇ ಸಾದಾ ಪುಷ್ಪವನ್ನು ಹೊಸಿಲಿಗೆ ಇಟ್ಟು ನಮಸ್ಕರಿಸಲಾಗುತ್ತದೆ. ಆದರೆ ಸೋಣೆ ತಿಂಗಳಲ್ಲಿ ನೈವೇದ್ಯವನ್ನೂ , ಅರ್ಪಿಸಲಾಗುತ್ತದೆ. ಮುಂಜಾನೆಯೇ ಶುಚಿರ್ಭೂತರಾಗಿ, ಹೊಸ್ತಿಲುಗಳನ್ನು ಶುಚಿಗೊಳಿಸಲಾಗುತ್ತದೆ. ಆಮೇಲೆ ಹೊಸ್ತಿಲಿನ ಎರಡೂ ಬದಿಗಳಿಗೆ ರಂಗೋಲಿಗಳನ್ನು ಹಾಕಿ ಹೂಗಳಿಂದ ಸಿಂಗರಿಸಲಾಗುತ್ತದೆ. ಹೂವೆಂದರೆ ಸೋಣೆ ಹೂ( ನೀರು‌ಕಡ್ಡಿ ಹೂ), ಕಾಯಿಹಿಂಡಿಗೆ( ಅರಶಿನ ಬಣ್ಣದ ಹೂ ಇರುವ ಗಿಡ) ಹೂ, ಕೆರಮಣೆ ಸೊಪ್ಪುಗಳನ್ನು ಬಳಸಲಾಗುತ್ತದೆ. ಜೊತೆಗೆ ಹಿಂದಿನ ‌ರಾತ್ರಿಯೇ ಸಿದ್ಧಪಡಿಸಿಟ್ಟು ಕೊಂಡ ಹುರಿದ ಹಲಸಿನ ಬೇಳೆ, ಗೇರುಬೀಜ ಹಾಗೂ ತೆಂಗಿನ ಕಾಯಿ ಒಡೆದು, ಒಂದು ತಂಬಿಗೆ ನೀರುಗಳನ್ನೆಲ್ಲಾ ಇಟ್ಟು ನೈವೇದ್ಯ ಸಲ್ಲಿಸಲಾಗುತ್ತದೆ. ಹೊಸ್ತಿಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಲಾಗುತ್ತದೆ. ಸೋಣೆ ತಿಂಗಳುದ್ದಕ್ಕೂ ಹೂಗಳನ್ನಿಟ್ಟು ಅಡ್ಡಬೀಳುವ ಸಂಪ್ರದಾಯವಿದೆ . ಈ ಪದ್ಧತಿಯನ್ನು ಕೆಲವು ಮನೆಗಳಲ್ಲಿ ಇಂದಿಗೂ ಆಚರಿಸುತ್ತಾರೆ. ಆದರೆ ಹಲಸಿನ ಬೀಜ, ಗೇರುಬೀಜಗಳನ್ನು ಸೋಣೆ ಸಂಕ್ರಾಂತಿಯಂದು ಮಾತ್ರ ನೈವೇದ್ಯ ಮಾಡಲಾಗುತ್ತದೆ. ಉಳಿದ ದಿನಗಳಲ್ಲಿ ಸೋಣೆ ಹೂ ಹಾಗೂ ಕಾಯಿ ಹಿಂಡಿಗೆ ಹೂಗಳನ್ನು ‌ಇಟ್ಟು ನಮಸ್ಕರಿಸಿ ಮನೆಗೆ, ಮನೆಯವರ ಒಳಿತಿಗಾಗಿ‌ ಹಾರೈಸುವ ಪದ್ಧತಿ ಬಳಕೆಯಲ್ಲಿದೆ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

7 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

17 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

18 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

18 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

24 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago